ರಾಜ್ಯ

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್‌

ಮಂಗಳೂರು: ಡ್ರಗ್ಸ್‌ ಜಾಲವನ್ನು ಬಂಧಿಸಲು ರಾಜ್ಯ ಪೊಲೀಸ್‌ ಇಲಾಖೆ ಸಮರ ಸಾರಿದ್ದು, ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು(ನ.30) ಪೊಲೀಸ್‌ ವಸತಿಗೃಹ ಹಾಗೂ ನೂತನ ಠಾಣೆಯ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಡ್ರಗ್ಸ್‌ ಹಾವಳಿ ಕುರಿತು ಸದನದಲ್ಲಿ ಚರ್ಚಿಸಿದ್ದೇವೆ. ಹೀಗಾಗಿ ಡ್ರಗ್ಸ್‌ ಜಾಲವನ್ನು ಗಂಭೀರವಾಗಿ ಪರಿಗಣಿಸಿ ಡ್ರಗ್ಸ್‌ ಮಾರಾಟ ಹಾಗೂ ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಬೇಕು ಎಂದು ಆದೇಶ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿ ನಾಶ ಮಾಡಲಾಗಿದೆ. ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆ ವತಿಯಿಂದ ಡ್ರಗ್ಸ್‌ ಜಾಲದ ಹಿಂದಿನ ಶಕ್ತಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿದೆ. ಆದರೆ ನಮ್ಮ ರಾಜ್ಯಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದೇಶಿ ವಿದ್ಯಾರ್ಥಿಗಳು ಕೂಡ ಡ್ರಗ್ಸ್‌ ಜಾಲದ ಹಿಂದೆ ಇದ್ದಾರೆಂಬ ಶಂಕೆ ಪತ್ತೆಯಾಗಿದೆ. ಹೀಗಾಗಿ ಅಂತಹ ವಿದ್ಯಾರ್ಥಿಗಳ ಬಗ್ಗೆ ಆಯಾ ದೇಶಗಳ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳದಿದ್ದರೆ ನಮ್ಮದೇ ಮಕ್ಕಳು ದಂಧೆಗೆ ಸಿಲುಕಿ ಹಾಳಾಗುತ್ತಾರೆ. ಈ ಕಾರಣಕ್ಕೆ ಪ್ರತಿ ತಿಂಗಳು ಆಯಾಯ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಡ್ರಗ್ಸ್‌ ಸೇವನೆ ಹಾಗೂ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

1 hour ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

2 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

6 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

6 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

11 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

11 hours ago