ರಾಜ್ಯ

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್‌

ಮಂಗಳೂರು: ಡ್ರಗ್ಸ್‌ ಜಾಲವನ್ನು ಬಂಧಿಸಲು ರಾಜ್ಯ ಪೊಲೀಸ್‌ ಇಲಾಖೆ ಸಮರ ಸಾರಿದ್ದು, ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು(ನ.30) ಪೊಲೀಸ್‌ ವಸತಿಗೃಹ ಹಾಗೂ ನೂತನ ಠಾಣೆಯ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಡ್ರಗ್ಸ್‌ ಹಾವಳಿ ಕುರಿತು ಸದನದಲ್ಲಿ ಚರ್ಚಿಸಿದ್ದೇವೆ. ಹೀಗಾಗಿ ಡ್ರಗ್ಸ್‌ ಜಾಲವನ್ನು ಗಂಭೀರವಾಗಿ ಪರಿಗಣಿಸಿ ಡ್ರಗ್ಸ್‌ ಮಾರಾಟ ಹಾಗೂ ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಬೇಕು ಎಂದು ಆದೇಶ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿ ನಾಶ ಮಾಡಲಾಗಿದೆ. ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆ ವತಿಯಿಂದ ಡ್ರಗ್ಸ್‌ ಜಾಲದ ಹಿಂದಿನ ಶಕ್ತಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿದೆ. ಆದರೆ ನಮ್ಮ ರಾಜ್ಯಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದೇಶಿ ವಿದ್ಯಾರ್ಥಿಗಳು ಕೂಡ ಡ್ರಗ್ಸ್‌ ಜಾಲದ ಹಿಂದೆ ಇದ್ದಾರೆಂಬ ಶಂಕೆ ಪತ್ತೆಯಾಗಿದೆ. ಹೀಗಾಗಿ ಅಂತಹ ವಿದ್ಯಾರ್ಥಿಗಳ ಬಗ್ಗೆ ಆಯಾ ದೇಶಗಳ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳದಿದ್ದರೆ ನಮ್ಮದೇ ಮಕ್ಕಳು ದಂಧೆಗೆ ಸಿಲುಕಿ ಹಾಳಾಗುತ್ತಾರೆ. ಈ ಕಾರಣಕ್ಕೆ ಪ್ರತಿ ತಿಂಗಳು ಆಯಾಯ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಡ್ರಗ್ಸ್‌ ಸೇವನೆ ಹಾಗೂ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

3 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

16 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

16 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

17 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

17 hours ago