ರಾಜ್ಯ

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮ: ಡಾ.ಜಿ.ಪರಮೇಶ್ವರ್‌

ಮಂಗಳೂರು: ಡ್ರಗ್ಸ್‌ ಜಾಲವನ್ನು ಬಂಧಿಸಲು ರಾಜ್ಯ ಪೊಲೀಸ್‌ ಇಲಾಖೆ ಸಮರ ಸಾರಿದ್ದು, ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು(ನ.30) ಪೊಲೀಸ್‌ ವಸತಿಗೃಹ ಹಾಗೂ ನೂತನ ಠಾಣೆಯ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಡ್ರಗ್ಸ್‌ ಹಾವಳಿ ಕುರಿತು ಸದನದಲ್ಲಿ ಚರ್ಚಿಸಿದ್ದೇವೆ. ಹೀಗಾಗಿ ಡ್ರಗ್ಸ್‌ ಜಾಲವನ್ನು ಗಂಭೀರವಾಗಿ ಪರಿಗಣಿಸಿ ಡ್ರಗ್ಸ್‌ ಮಾರಾಟ ಹಾಗೂ ಪೂರೈಕೆ ಮಾಡುವ ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಬೇಕು ಎಂದು ಆದೇಶ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿ ನಾಶ ಮಾಡಲಾಗಿದೆ. ಈಗಾಗಲೇ ರಾಜ್ಯ ಪೊಲೀಸ್‌ ಇಲಾಖೆ ವತಿಯಿಂದ ಡ್ರಗ್ಸ್‌ ಜಾಲದ ಹಿಂದಿನ ಶಕ್ತಿಗಳನ್ನು ಮಟ್ಟ ಹಾಕುವ ಕೆಲಸ ನಡೆಯುತ್ತಿದೆ. ಆದರೆ ನಮ್ಮ ರಾಜ್ಯಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದೇಶಿ ವಿದ್ಯಾರ್ಥಿಗಳು ಕೂಡ ಡ್ರಗ್ಸ್‌ ಜಾಲದ ಹಿಂದೆ ಇದ್ದಾರೆಂಬ ಶಂಕೆ ಪತ್ತೆಯಾಗಿದೆ. ಹೀಗಾಗಿ ಅಂತಹ ವಿದ್ಯಾರ್ಥಿಗಳ ಬಗ್ಗೆ ಆಯಾ ದೇಶಗಳ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಆ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳದಿದ್ದರೆ ನಮ್ಮದೇ ಮಕ್ಕಳು ದಂಧೆಗೆ ಸಿಲುಕಿ ಹಾಳಾಗುತ್ತಾರೆ. ಈ ಕಾರಣಕ್ಕೆ ಪ್ರತಿ ತಿಂಗಳು ಆಯಾಯ ಠಾಣೆ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ ಪೊಲೀಸರು ಭೇಟಿ ನೀಡಿ ಡ್ರಗ್ಸ್‌ ಸೇವನೆ ಹಾಗೂ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago