ಮೈಸೂರು: ಡಾ. ಸಿ.ಎನ್ ಮಂಜುನಾಥ್ ನಮ್ಮ ಪಕ್ಷದ ಅಭ್ಯರ್ಥಿಯಲ್ಲ, ಅವರು ಬಿಜೆಪಿ ಪಕ್ಷ ಅಭ್ಯರ್ಥಿ ಎಂದು ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಾ. ಸಿ.ಎನ್ ಮಂಜುನಾಥ್ ಅವರು ಜೆಡಿಎಸ್ ಅಭ್ಯರ್ಥಿ ಅಲ್ಲ. ಅವರು ಬಿಜೆಪಿಗೆ ಹೋಗಾಯಿತು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್.ಡಿ ದೇವೇಗೌಡ ಅವರ ಅಳಿಯ ಡಾ ಸಿ.ಎನ್ ಮಂಜುನಾಥ ಅವರನ್ನು ಬಿಜೆಪಿ ಮೈತ್ರಿಯೂ ಜಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಜಿಟಿಡಿ, ಯಾರು ನಮ್ಮ ಚೆಹ್ನೆ ಮೇಲೆ ಚುನಾವಣೆಗೆ ನಿಲ್ಲುತ್ತಾರೋ ಅವರು ಮಾತ್ರ ನಮ್ಮ ಅಭ್ಯರ್ಥಿಗಳು. ಮಂಜುನಾಥ್ ಬಿಜೆಪಿಗೆ ಸೇರಾಯಿತು. ಡಾ.ಮಂಜುನಾಥ್ ತಮ್ಮ ಪಕ್ಷದ ಅಭ್ಯರ್ಥಿಯೇ ಅಲ್ಲ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಮಂಜುನಾಥ್ ಅವರನ್ನು ಇಷ್ಟಪಟ್ಟಿದ್ದಾರೆ. ಇದುವರೆಗೆ ಡಾ.ಮಂಜುನಾಥ್ ಯಾವತ್ತೂ ರಾಜಕೀಯದ ಬಗ್ಗೆ ಮಾತಾಡಿಲ್ಲ, ಅವರಿಗೆ ರಾಜಕೀಯ ಅನ್ನೋದು ಗೊತ್ತಿಲ್ಲ. ಆದರೆ, ಅವರ ಜನಪ್ರಿಯತೆಯನ್ನು ನೋಡಿ ಬಿಜೆಪಿ ನಾಯಕರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಜಿಟಿಡಿ ಸ್ಪಷ್ಟನೆ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…