ರಾಜ್ಯ

ಉಮಾಶ್ರೀಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ ; ವಿಷ್ಣುವರ್ಧನ್‌, ಪುಟ್ಟಣ್ಣ ಪ್ರಶಸ್ತಿಯೂ ಪ್ರಕಟ

ಬೆಂಗಳೂರು : ರಾಜಕಾರಣಿ ಹಾಗೂ ಹಿರಿಯ ನಟಿ ಉಮಾಶ್ರೀ ಅವರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಪ್ರತಿಷ್ಠಿತ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಘೋಷಿಸಲಾಗಿದೆ.

2019ನೇ ಸಾಲಿಗೆ ಅನ್ವಯವಾಗುವಂತೆ ಡಾ. ರಾಜ್ ಕುಮಾರ್ ಪ್ರಶಸ್ತಿ, ಡಾ. ವಿಷ್ಣುವರ್ದನ್ ಪ್ರಶಸ್ತಿ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗಳನ್ನು ನೀಡುವ ಸಲುವಾಗಿ ಸರ್ಕಾರ ನೇಮಿಸಿದ್ದ ವಿವಿಧ ಸಮಿತಿಗಳು ನೀಡಿದ ಶಿಫಾರಸ್ಸಿನ ಅನ್ವಯ ಈ ಪ್ರಶಸ್ತಿಗಳಿಗೆ ಭಾಜನರಾದವರ ಪಟ್ಟಿಯನ್ನು ಅ. 30ರಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

2019ನೇ ಸಾಲಿಗೆ ಅನ್ವಯವಾಗುವಂತೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ. ವಿಷ್ಣುವರ್ದನ್ ಪ್ರಶಸ್ತಿಗೆ ಆಯ್ಕೆಯಾದವರನ್ನು ಆಯ್ಕೆ ಮಾಡಲಾಗಿದ್ದು ಆ ಪಟ್ಟಿಯನ್ನೂ ಅ. 30ರಂದು ಬಿಡುಗಡೆ ಇದೇ ವೇಳೆ ಮಾಡಲಾಗಿದೆ.

ಇದನ್ನೂ ಓದಿ:-ಹುಣಸೂರು | ನಾಪತ್ತೆಯಾಗಿದ್ದ ವಕೀಲ ಶವವಾಗಿ ಪತ್ತೆ

2019ರ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ಹಿರಿಯ ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಆಯ್ಕೆಯಾಗಿದ್ದಾರೆ. ಇನ್ನು, 2019ರ ಡಾ. ವಿಷ್ಣುವರ್ದನ್ ಪ್ರಶಸ್ತಿಗೆ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ ಅವರು ಆಯ್ಕೆಯಾಗಿದ್ದಾರೆ. ಡಾ. ರಾಜ್ ಕುಮಾರ್ ಪ್ರಶಸ್ತಿ, ಡಾ. ವಿಷ್ಣುವರ್ದನ್ ಪ್ರಶಸ್ತಿ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ವಿಜೇತರಿಗೆ ತಲಾ 5 ಲಕ್ಷ ರೂ. ನಗದು ಹಾಗೂ 50 ಗ್ರಾಂ. ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago