ರಾಜ್ಯ

Namma Metro: ಬೆಂಗಳೂರಿನತ್ತ ಚಾಲಕರಹಿತ ಮೆಟ್ರೊ ರೈಲು; ಯಾವಾಗಿನಿಂದ ಸಂಚಾರ?

ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ 6 ಬೋಗಿಗಳುಳ್ಳ ಚಾಲಕರಹಿತ ಮೆಟ್ರೊ ರೈಲನ್ನು ಕಳುಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಅಧಿಕಾರಿಗಳು ಫ್ಯಾಕ್ಟರಿ ಪರೀಕ್ಷೆ ಹಾಗೂ ತಪಾಸಣೆ ನಡೆಸಿದ ಬಳಿಕ ಜನವರಿ 20ರಂದು ಹಡಗಿಗೆ ಲೋಡ್‌ ಮಾಡಿದ್ದಾರೆ.

ಚಾಲಕರಹಿತ ಮೆಟ್ರೊ ರೈಲು ಹೊತ್ತ ಹಡಗು ಫೆಬ್ರವರಿ ಮಧ್ಯದಲ್ಲಿ ಅಥವಾ ಅಂತ್ಯದ ವೇಳೆಗೆ ಚೆನ್ನೈ ತಲುಪಲಿದ್ದು, ಬಳಿಕ ಚೆನ್ನೈನಿಂದ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ರೈಲನ್ನು ತಂದು ಹೆಬ್ಬಗೋಡಿ ಡಿಪೊಗೆ ಸಾಗಿಸಲಾಗುತ್ತದೆ. ನಂತರ ಈ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಜೋಡಣೆ ಮಾಡಿ ಸುಮಾರು ಮೂರು ತಿಂಗಳುಗಳ ಕಾಲ ಪ್ರಯೋಗಗಳನ್ನು ನಡೆಸಲಾಗುವುದು.

ಇನ್ನು ಈ ಮೆಟ್ರೊ ರೈಲು ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ನಡುವಿನ 19 ಕಿಲೊಮೀಟರ್‌ ಅಂತರದಲ್ಲಿ ಸಂಚರಿಸಲಿದ್ದು ಸೆಪ್ಟೆಂಬರ್‌ ತಿಂಗಳಲ್ಲಿ ರೈಲಿಗೆ ಚಾಲನೆ ದೊರೆಯುವ ನಿರೀಕ್ಷೆ ಇದೆ. ಈ ರೈಲು ಪ್ರೋಗ್ರಾಂ ಆಧಾರದ ಮೇಲೆ ಚಾಲಕನಿಲ್ಲದಿದ್ದರೂ ಚಲಿಸಲಿದ್ದು, ಕಂಟ್ರೋಲ್‌ ರೂಮ್‌ನಲ್ಲಿ ನಿಗಾ ವಹಿಸಲಾಗುತ್ತದೆ. ಗಂಟೆಗೆ 80 ಕಿಲೋಮೀಟರ್‌ ವೇಗದಲ್ಲಿ ಈ ರೈಲು ಓಡಲಿದ್ದು, ಒಂದು ವೇಳೆ ಸಮಸ್ಯೆ ಉಂಟಾದರೆ ಆಪರೇಷನ್‌ ಕಂಟ್ರೋಲ್‌ ಸೆಂಟರ್‌ಗೆ ಸಂದೇಶ ರವಾನಿಸಲಿದೆ. ಈ ಮೂಲಕ ತಕ್ಷಣವೇ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತದೆ.

andolana

Recent Posts

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

22 mins ago

ಬೆಳೆ ವಿಮೆ ಪರಿಹಾರ ಸುಧಾರಣೆ : ಅದೇ ಹಂಗಾಮಿನಲ್ಲೇ ವಿತರಣೆಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…

51 mins ago

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

2 hours ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

2 hours ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

2 hours ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

3 hours ago