ರಾಜ್ಯ

Namma Metro: ಬೆಂಗಳೂರಿನತ್ತ ಚಾಲಕರಹಿತ ಮೆಟ್ರೊ ರೈಲು; ಯಾವಾಗಿನಿಂದ ಸಂಚಾರ?

ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ 6 ಬೋಗಿಗಳುಳ್ಳ ಚಾಲಕರಹಿತ ಮೆಟ್ರೊ ರೈಲನ್ನು ಕಳುಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಅಧಿಕಾರಿಗಳು ಫ್ಯಾಕ್ಟರಿ ಪರೀಕ್ಷೆ ಹಾಗೂ ತಪಾಸಣೆ ನಡೆಸಿದ ಬಳಿಕ ಜನವರಿ 20ರಂದು ಹಡಗಿಗೆ ಲೋಡ್‌ ಮಾಡಿದ್ದಾರೆ.

ಚಾಲಕರಹಿತ ಮೆಟ್ರೊ ರೈಲು ಹೊತ್ತ ಹಡಗು ಫೆಬ್ರವರಿ ಮಧ್ಯದಲ್ಲಿ ಅಥವಾ ಅಂತ್ಯದ ವೇಳೆಗೆ ಚೆನ್ನೈ ತಲುಪಲಿದ್ದು, ಬಳಿಕ ಚೆನ್ನೈನಿಂದ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ರೈಲನ್ನು ತಂದು ಹೆಬ್ಬಗೋಡಿ ಡಿಪೊಗೆ ಸಾಗಿಸಲಾಗುತ್ತದೆ. ನಂತರ ಈ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಜೋಡಣೆ ಮಾಡಿ ಸುಮಾರು ಮೂರು ತಿಂಗಳುಗಳ ಕಾಲ ಪ್ರಯೋಗಗಳನ್ನು ನಡೆಸಲಾಗುವುದು.

ಇನ್ನು ಈ ಮೆಟ್ರೊ ರೈಲು ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ನಡುವಿನ 19 ಕಿಲೊಮೀಟರ್‌ ಅಂತರದಲ್ಲಿ ಸಂಚರಿಸಲಿದ್ದು ಸೆಪ್ಟೆಂಬರ್‌ ತಿಂಗಳಲ್ಲಿ ರೈಲಿಗೆ ಚಾಲನೆ ದೊರೆಯುವ ನಿರೀಕ್ಷೆ ಇದೆ. ಈ ರೈಲು ಪ್ರೋಗ್ರಾಂ ಆಧಾರದ ಮೇಲೆ ಚಾಲಕನಿಲ್ಲದಿದ್ದರೂ ಚಲಿಸಲಿದ್ದು, ಕಂಟ್ರೋಲ್‌ ರೂಮ್‌ನಲ್ಲಿ ನಿಗಾ ವಹಿಸಲಾಗುತ್ತದೆ. ಗಂಟೆಗೆ 80 ಕಿಲೋಮೀಟರ್‌ ವೇಗದಲ್ಲಿ ಈ ರೈಲು ಓಡಲಿದ್ದು, ಒಂದು ವೇಳೆ ಸಮಸ್ಯೆ ಉಂಟಾದರೆ ಆಪರೇಷನ್‌ ಕಂಟ್ರೋಲ್‌ ಸೆಂಟರ್‌ಗೆ ಸಂದೇಶ ರವಾನಿಸಲಿದೆ. ಈ ಮೂಲಕ ತಕ್ಷಣವೇ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತದೆ.

andolana

Recent Posts

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

20 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

47 mins ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

1 hour ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

5 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

5 hours ago