ರಾಜ್ಯ

Namma Metro: ಬೆಂಗಳೂರಿನತ್ತ ಚಾಲಕರಹಿತ ಮೆಟ್ರೊ ರೈಲು; ಯಾವಾಗಿನಿಂದ ಸಂಚಾರ?

ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ 6 ಬೋಗಿಗಳುಳ್ಳ ಚಾಲಕರಹಿತ ಮೆಟ್ರೊ ರೈಲನ್ನು ಕಳುಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಅಧಿಕಾರಿಗಳು ಫ್ಯಾಕ್ಟರಿ ಪರೀಕ್ಷೆ ಹಾಗೂ ತಪಾಸಣೆ ನಡೆಸಿದ ಬಳಿಕ ಜನವರಿ 20ರಂದು ಹಡಗಿಗೆ ಲೋಡ್‌ ಮಾಡಿದ್ದಾರೆ.

ಚಾಲಕರಹಿತ ಮೆಟ್ರೊ ರೈಲು ಹೊತ್ತ ಹಡಗು ಫೆಬ್ರವರಿ ಮಧ್ಯದಲ್ಲಿ ಅಥವಾ ಅಂತ್ಯದ ವೇಳೆಗೆ ಚೆನ್ನೈ ತಲುಪಲಿದ್ದು, ಬಳಿಕ ಚೆನ್ನೈನಿಂದ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ರೈಲನ್ನು ತಂದು ಹೆಬ್ಬಗೋಡಿ ಡಿಪೊಗೆ ಸಾಗಿಸಲಾಗುತ್ತದೆ. ನಂತರ ಈ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಜೋಡಣೆ ಮಾಡಿ ಸುಮಾರು ಮೂರು ತಿಂಗಳುಗಳ ಕಾಲ ಪ್ರಯೋಗಗಳನ್ನು ನಡೆಸಲಾಗುವುದು.

ಇನ್ನು ಈ ಮೆಟ್ರೊ ರೈಲು ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ನಡುವಿನ 19 ಕಿಲೊಮೀಟರ್‌ ಅಂತರದಲ್ಲಿ ಸಂಚರಿಸಲಿದ್ದು ಸೆಪ್ಟೆಂಬರ್‌ ತಿಂಗಳಲ್ಲಿ ರೈಲಿಗೆ ಚಾಲನೆ ದೊರೆಯುವ ನಿರೀಕ್ಷೆ ಇದೆ. ಈ ರೈಲು ಪ್ರೋಗ್ರಾಂ ಆಧಾರದ ಮೇಲೆ ಚಾಲಕನಿಲ್ಲದಿದ್ದರೂ ಚಲಿಸಲಿದ್ದು, ಕಂಟ್ರೋಲ್‌ ರೂಮ್‌ನಲ್ಲಿ ನಿಗಾ ವಹಿಸಲಾಗುತ್ತದೆ. ಗಂಟೆಗೆ 80 ಕಿಲೋಮೀಟರ್‌ ವೇಗದಲ್ಲಿ ಈ ರೈಲು ಓಡಲಿದ್ದು, ಒಂದು ವೇಳೆ ಸಮಸ್ಯೆ ಉಂಟಾದರೆ ಆಪರೇಷನ್‌ ಕಂಟ್ರೋಲ್‌ ಸೆಂಟರ್‌ಗೆ ಸಂದೇಶ ರವಾನಿಸಲಿದೆ. ಈ ಮೂಲಕ ತಕ್ಷಣವೇ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತದೆ.

andolana

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

7 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

18 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

50 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago