ರಾಜ್ಯ

Namma Metro: ಬೆಂಗಳೂರಿನತ್ತ ಚಾಲಕರಹಿತ ಮೆಟ್ರೊ ರೈಲು; ಯಾವಾಗಿನಿಂದ ಸಂಚಾರ?

ನಮ್ಮ ಮೆಟ್ರೊ ಚಾಲಕರಹಿತ ಮೆಟ್ರೊ ರೈಲನ್ನು ಬೆಂಗಳೂರಿನಲ್ಲಿ ಓಡಿಸಲು ಸಜ್ಜಾಗುತ್ತಿದ್ದು, ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಡುವೆ ಈ ರೈಲು ಸಂಚರಿಸಲಿದೆ. ಚೀನಾದಿಂದ ಬೆಂಗಳೂರಿಗೆ ಈ 6 ಬೋಗಿಗಳುಳ್ಳ ಚಾಲಕರಹಿತ ಮೆಟ್ರೊ ರೈಲನ್ನು ಕಳುಹಿಸಲಾಗಿದ್ದು, ಬಿಎಂಆರ್‌ಸಿಎಲ್‌ ಅಧಿಕಾರಿಗಳು ಫ್ಯಾಕ್ಟರಿ ಪರೀಕ್ಷೆ ಹಾಗೂ ತಪಾಸಣೆ ನಡೆಸಿದ ಬಳಿಕ ಜನವರಿ 20ರಂದು ಹಡಗಿಗೆ ಲೋಡ್‌ ಮಾಡಿದ್ದಾರೆ.

ಚಾಲಕರಹಿತ ಮೆಟ್ರೊ ರೈಲು ಹೊತ್ತ ಹಡಗು ಫೆಬ್ರವರಿ ಮಧ್ಯದಲ್ಲಿ ಅಥವಾ ಅಂತ್ಯದ ವೇಳೆಗೆ ಚೆನ್ನೈ ತಲುಪಲಿದ್ದು, ಬಳಿಕ ಚೆನ್ನೈನಿಂದ ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ರೈಲನ್ನು ತಂದು ಹೆಬ್ಬಗೋಡಿ ಡಿಪೊಗೆ ಸಾಗಿಸಲಾಗುತ್ತದೆ. ನಂತರ ಈ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಜೋಡಣೆ ಮಾಡಿ ಸುಮಾರು ಮೂರು ತಿಂಗಳುಗಳ ಕಾಲ ಪ್ರಯೋಗಗಳನ್ನು ನಡೆಸಲಾಗುವುದು.

ಇನ್ನು ಈ ಮೆಟ್ರೊ ರೈಲು ಆರ್‌ವಿ ರಸ್ತೆ ಹಾಗೂ ಎಲೆಕ್ಟ್ರಾನಿಕ್‌ ಸಿಟಿ ನಡುವಿನ 19 ಕಿಲೊಮೀಟರ್‌ ಅಂತರದಲ್ಲಿ ಸಂಚರಿಸಲಿದ್ದು ಸೆಪ್ಟೆಂಬರ್‌ ತಿಂಗಳಲ್ಲಿ ರೈಲಿಗೆ ಚಾಲನೆ ದೊರೆಯುವ ನಿರೀಕ್ಷೆ ಇದೆ. ಈ ರೈಲು ಪ್ರೋಗ್ರಾಂ ಆಧಾರದ ಮೇಲೆ ಚಾಲಕನಿಲ್ಲದಿದ್ದರೂ ಚಲಿಸಲಿದ್ದು, ಕಂಟ್ರೋಲ್‌ ರೂಮ್‌ನಲ್ಲಿ ನಿಗಾ ವಹಿಸಲಾಗುತ್ತದೆ. ಗಂಟೆಗೆ 80 ಕಿಲೋಮೀಟರ್‌ ವೇಗದಲ್ಲಿ ಈ ರೈಲು ಓಡಲಿದ್ದು, ಒಂದು ವೇಳೆ ಸಮಸ್ಯೆ ಉಂಟಾದರೆ ಆಪರೇಷನ್‌ ಕಂಟ್ರೋಲ್‌ ಸೆಂಟರ್‌ಗೆ ಸಂದೇಶ ರವಾನಿಸಲಿದೆ. ಈ ಮೂಲಕ ತಕ್ಷಣವೇ ರೈಲಿನ ಸಂಚಾರವನ್ನು ನಿಲ್ಲಿಸಲಾಗುತ್ತದೆ.

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

12 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago