ರಾಜ್ಯ

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಬರ ಘೋಷಿಸುತ್ತೇವೆ. ಪ್ರತಿ ವಾರವೂ ಬರ ಪರಿಸ್ಥಿತಿ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು. ಬರ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿಯವರು ಕೂಡ ತಂಡ ಮಾಡಿಕೊಂಡು ಹೋಗಿದ್ದರು. ಆದರೆ ಆ ಬಗ್ಗೆ ಸದನದಲ್ಲಿ ಚರ್ಚೆಯೂ ಮಾಡಿಲ್ಲ. ಮುಖ್ಯಮಂತ್ರಿಗಳಿಗಾಗಲಿ, ಕಂದಾಯ ಸಚಿವನಾದ ನನಗಾಗಲಿ ವರದಿ ಅಥವಾ ಪತ್ರವನ್ನೂ ನೀಡಿಲ್ಲ.

ಪರಮೇಶ್ವರ ಅವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಿ ಎಂದು ಹೈಕಮಾಂಡ್‌ಗೆ ಒತ್ತಾಯಿಸಿರುವುದಾಗಿ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರು ರಾಜೀನಾಮೆ ನೀಡುವ ವೇಳೆ ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳಿದ್ದರು. ಅದನ್ನು ಹೈಕಮಾಂಡ್ ಪರಿಗಣನೆಗೆ ತೆಗೆದುಕೊಂಡಿಲ್ಲ. ಉಪ ಮುಖ್ಯಮಂತ್ರಿಯಾಗಿ ನನ್ನನ್ನು ಮಾಡಬೇಕು ಎಂದೂ ಅವರು ಹೇಳಿದ್ದರು. ಹಾಗಾಗಿ ಸಿದ್ದರಾಮಯ್ಯನವರು ಹೇಳಿರುವುದು ಸತ್ಯ ಎಂದರು.

ನಾಗೇಂದ್ರ ಅವರ ರಾಜೀನಾಮೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಗುರುವಾರ ಮುಖ್ಯಮಂತ್ರಿಗಳು ದಿಲ್ಲಿಗೆ ಹೋಗುತ್ತಾರೆ. ಹೈಕಮಾಂಡ್ ಭೇಟಿಯಾದರೆ ಅಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಬಹುದು. ಸಂಪುಟ ಪುನರ್ ರಚನೆ ಊಹಾಪೋಹವಷ್ಟೇ. ಹೈಕಮಾಂಡ್ ತೀರ್ಮಾನದಂತೆ ಆಗುತ್ತದೆ ಎಂದು ತಿಳಿಸಿದರು. ಯಾವ ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಅವರ ಹೆಸರು ಇಲ್ಲ. ನಾನು ಗೃಹಸಚಿವನಾಗಿದ್ದವನು. ನನಗೆ ಮಾಹಿತಿ ಇದೆ. ಸಿಬಿಐ ತನಿಖೆ ಮಾಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಆಗುತ್ತದೆ. ಈ ವಿಚಾರದಲ್ಲಿ ಬಿಜೆಪಿ ಪಾದಯಾತ್ರೆ ಮಾಡುತ್ತಿರುವುದು ರಾಜಕೀಯವಷ್ಟೇ. ಸದನದಲ್ಲೂ ಪ್ರಶ್ನೆಗಳನ್ನು ಕೇಳಿ ಉತ್ತರಿಸಲು ನಾವು ಸಮರ್ಥರಿದ್ದೇವೆ ಎಂದು ಹೇಳಿದ್ದೆವು. ಆದರೆ ಈಗ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

30 mins ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

2 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

9 hours ago