Drought in 9 districts of interior due to lack of rain
ಬೆಂಗಳೂರು: ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಂತೆ ಇರುವ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿವೃಷ್ಟಿ ಉಂಟಾಗಿದ್ದರೆ, ಒಳನಾಡಿನ ಒಂಭತ್ತು ಜಿಲ್ಲೆಗಳ 74 ತಾಲ್ಲೂಕುಗಳ 338 ಹೋಬಳಿಗಳಲ್ಲಿ ಮಳೆ ಕೊರತೆಯಾಗಿ ಅನಾವೃಷ್ಟಿಯಾಗಿದೆ.
ಜೂನ್-ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಬರದ ಛಾಯೆ ಆವರಿಸುವ ಆತಂಕ ರೈತ ಸಮುದಾಯದಲ್ಲಿ ಎದುರಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್.1ರಿಂದ ಇಲ್ಲಿಯ ತನಕ ರಾಜ್ಯದಲ್ಲಿ 463 ಮಿ.ಮೀನಷ್ಟು ವಾಡಿಕೆ ಪ್ರಮಾಣದ ಮಳೆಯಾಗಿದೆ.
ಕರಾವಳಿಯಲ್ಲಿ ಶೇ.8ರಷ್ಟು ವಾಡಿಕೆಗಿಂತ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಶೇ.2, ಉತ್ತರ ಒಳನಾಡಿನಲ್ಲಿ ಶೇ.4 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ.19ರಷ್ಟು ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ.
ರಾಜ್ಯದ 22 ಜಿಲ್ಲೆಗಳ 162 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅದರಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಕೊರತೆ ತೀವ್ರವಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಬಳ್ಳಾರಿ, ಬೀದರ್, ರಾಯಚೂರು, ಮೈಸೂರು, ಬೆಂಗಳೂರು ದಕ್ಷಿಣ ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…