Drought in 9 districts of interior due to lack of rain
ಬೆಂಗಳೂರು: ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಂತೆ ಇರುವ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿವೃಷ್ಟಿ ಉಂಟಾಗಿದ್ದರೆ, ಒಳನಾಡಿನ ಒಂಭತ್ತು ಜಿಲ್ಲೆಗಳ 74 ತಾಲ್ಲೂಕುಗಳ 338 ಹೋಬಳಿಗಳಲ್ಲಿ ಮಳೆ ಕೊರತೆಯಾಗಿ ಅನಾವೃಷ್ಟಿಯಾಗಿದೆ.
ಜೂನ್-ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದು, ಬರದ ಛಾಯೆ ಆವರಿಸುವ ಆತಂಕ ರೈತ ಸಮುದಾಯದಲ್ಲಿ ಎದುರಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್.1ರಿಂದ ಇಲ್ಲಿಯ ತನಕ ರಾಜ್ಯದಲ್ಲಿ 463 ಮಿ.ಮೀನಷ್ಟು ವಾಡಿಕೆ ಪ್ರಮಾಣದ ಮಳೆಯಾಗಿದೆ.
ಕರಾವಳಿಯಲ್ಲಿ ಶೇ.8ರಷ್ಟು ವಾಡಿಕೆಗಿಂತ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಶೇ.2, ಉತ್ತರ ಒಳನಾಡಿನಲ್ಲಿ ಶೇ.4 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ.19ರಷ್ಟು ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ.
ರಾಜ್ಯದ 22 ಜಿಲ್ಲೆಗಳ 162 ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಅದರಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಕೊರತೆ ತೀವ್ರವಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಬಳ್ಳಾರಿ, ಬೀದರ್, ರಾಯಚೂರು, ಮೈಸೂರು, ಬೆಂಗಳೂರು ದಕ್ಷಿಣ ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…