ರಾಜ್ಯ

ವಾರಾಂತ್ಯಕ್ಕೆ ರೈತರ ಖಾತೆಗೆ ಸೇರಲಿದೆ ಬರ ಪರಿಹಾರದ ಹಣ

ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ಬರಗಾಲದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ. ಪರಿಹಾರದ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬರ ಪರಿಹಾರದ ಹಣಕ್ಕಾಗಿ ರೈತ ನೊಂದಣಿ ಹಾಗೂ ಫಲಾನುಭವಿ ಮಾಹಿತಿ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಹಾಗಾಗಿ ಅದರಲ್ಲಿ ನೊಂದಾಯಿಸಿಕೊಳ್ಳಬೇಕು. ಇದು ಮೊದಲ ಬಾರಿಗೆ ಅಪ್ಲಿಕೇಶನ್‌ ಆಧರಿತ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಪರಿಹಾರ ನೀಡುವುದು ಸ್ವಲ್ಪ ವಿಳಂಬವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಅವರು ಕೇಂದ್ರ ಸರ್ಕಾರ ಬರಪರಿಹಾರದ ನೆರವನ್ನು ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಕೇಂದ್ರದ ಬರ ಅಧ್ಯಯನದ ತಂಡ ಅಕ್ಟೋಬರ್‌ ಮೊದಲ ವಾರದಲ್ಲಿ ಬರ ಅಧ್ಯಯನ ಮಾಡಿದೆ. ಅಕ್ಟೋಬರ್‌ 13 ರಂದು ಆ ವರದಿಯನ್ನು ಸಲ್ಲಿಸಲಾಗಿದೆ. ಆದರೇ ಇನ್ನೂ ಕೂಡ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಹರಿಹಾಯ್ದಿದ್ದಾರೆ.

ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಕೂಡ ಪರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಎರಡೆರಡುಬಾರಿ ಪತ್ರ ಬರೆದಿದ್ದೇವೆ. ಆದರೂ ಕೂಡ ಏನು ಪ್ರಯೋಜನವಾಗಿಲ್ಲ. ಕೇಂದ್ರದ ಕೃಷಿ ಸಚಿವರು ಹಾಗೂ ಗೃಹ ಸಚಿವರು ನಮ್ಮನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.

lokesh

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

6 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

8 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago