ರಾಜ್ಯ

ವಾರಾಂತ್ಯಕ್ಕೆ ರೈತರ ಖಾತೆಗೆ ಸೇರಲಿದೆ ಬರ ಪರಿಹಾರದ ಹಣ

ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ಬರಗಾಲದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ. ಪರಿಹಾರದ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬರ ಪರಿಹಾರದ ಹಣಕ್ಕಾಗಿ ರೈತ ನೊಂದಣಿ ಹಾಗೂ ಫಲಾನುಭವಿ ಮಾಹಿತಿ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಹಾಗಾಗಿ ಅದರಲ್ಲಿ ನೊಂದಾಯಿಸಿಕೊಳ್ಳಬೇಕು. ಇದು ಮೊದಲ ಬಾರಿಗೆ ಅಪ್ಲಿಕೇಶನ್‌ ಆಧರಿತ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಪರಿಹಾರ ನೀಡುವುದು ಸ್ವಲ್ಪ ವಿಳಂಬವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಅವರು ಕೇಂದ್ರ ಸರ್ಕಾರ ಬರಪರಿಹಾರದ ನೆರವನ್ನು ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಕೇಂದ್ರದ ಬರ ಅಧ್ಯಯನದ ತಂಡ ಅಕ್ಟೋಬರ್‌ ಮೊದಲ ವಾರದಲ್ಲಿ ಬರ ಅಧ್ಯಯನ ಮಾಡಿದೆ. ಅಕ್ಟೋಬರ್‌ 13 ರಂದು ಆ ವರದಿಯನ್ನು ಸಲ್ಲಿಸಲಾಗಿದೆ. ಆದರೇ ಇನ್ನೂ ಕೂಡ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಹರಿಹಾಯ್ದಿದ್ದಾರೆ.

ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಕೂಡ ಪರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಎರಡೆರಡುಬಾರಿ ಪತ್ರ ಬರೆದಿದ್ದೇವೆ. ಆದರೂ ಕೂಡ ಏನು ಪ್ರಯೋಜನವಾಗಿಲ್ಲ. ಕೇಂದ್ರದ ಕೃಷಿ ಸಚಿವರು ಹಾಗೂ ಗೃಹ ಸಚಿವರು ನಮ್ಮನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.

lokesh

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago