ಬೆಳಗಾವಿ : ಬರದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು ಬರಗಾಲದಿಂದಾಗಿ ಬೇಳೆ ನಷ್ಟ ಅನುಭವಿಸುತ್ತಿರುವ ಎಲ್ಲಾ ರೈತರಿಗೆ ಈ ವಾರದ ಅಂತ್ಯದಲ್ಲಿ ರಾಜ್ಯಸರ್ಕಾರವು 2000 ರೂ. ಬರ ಪರಿಹಾರ ಹಣವನ್ನು ನೀಡಲಿದೆ. ಪರಿಹಾರದ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬರ ಪರಿಹಾರದ ಹಣಕ್ಕಾಗಿ ರೈತ ನೊಂದಣಿ ಹಾಗೂ ಫಲಾನುಭವಿ ಮಾಹಿತಿ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಹಾಗಾಗಿ ಅದರಲ್ಲಿ ನೊಂದಾಯಿಸಿಕೊಳ್ಳಬೇಕು. ಇದು ಮೊದಲ ಬಾರಿಗೆ ಅಪ್ಲಿಕೇಶನ್ ಆಧರಿತ ವ್ಯವಸ್ಥೆಯನ್ನು ಪರಿಚಯಿಸುವುದರಿಂದ ಪರಿಹಾರ ನೀಡುವುದು ಸ್ವಲ್ಪ ವಿಳಂಬವಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಅವರು ಕೇಂದ್ರ ಸರ್ಕಾರ ಬರಪರಿಹಾರದ ನೆರವನ್ನು ಬಿಡುಗಡೆ ಮಾಡುವಲ್ಲಿ ವಿಫಲವಾಗಿದೆ. ಕೇಂದ್ರದ ಬರ ಅಧ್ಯಯನದ ತಂಡ ಅಕ್ಟೋಬರ್ ಮೊದಲ ವಾರದಲ್ಲಿ ಬರ ಅಧ್ಯಯನ ಮಾಡಿದೆ. ಅಕ್ಟೋಬರ್ 13 ರಂದು ಆ ವರದಿಯನ್ನು ಸಲ್ಲಿಸಲಾಗಿದೆ. ಆದರೇ ಇನ್ನೂ ಕೂಡ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಹರಿಹಾಯ್ದಿದ್ದಾರೆ.
ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಕೂಡ ಪರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಎರಡೆರಡುಬಾರಿ ಪತ್ರ ಬರೆದಿದ್ದೇವೆ. ಆದರೂ ಕೂಡ ಏನು ಪ್ರಯೋಜನವಾಗಿಲ್ಲ. ಕೇಂದ್ರದ ಕೃಷಿ ಸಚಿವರು ಹಾಗೂ ಗೃಹ ಸಚಿವರು ನಮ್ಮನ್ನು ಭೇಟಿ ಮಾಡಿಲ್ಲ ಎಂದು ಕಿಡಿಕಾರಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…