ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಬಂದಿದ್ದು, ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ದತ್ತಾಂಶದ ಆಧಾರದಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಆಯ್ದ ಉಪ ವಿಭಾಗಾಧಿಕಾರಗಳು ಮತ್ತು ತಹಶೀಲ್ದಾರರ ಜೊತೆ ಸಭೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಅವಧಿಯಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಆ ಎಲ್ಲಾ ಅಕ್ರಮಗಳನ್ನು ತಡೆದು ಫ್ರೂಟ್ಸ್ ದತ್ತಾಂಶದ ಆಧಾರದ ಮೇಲೆ ಪರಿಹಾರ ವಿತರಣೆ ಮಾಡಲು ಮುಂದಾಗಿದ್ದೇವೆ. ಎಲ್ಲವೂ ಅಂದುಕೊಂಡಂತೆ ಆದರೆ, ರೈತರಿಗೆ ಡಿಸೆಂಬರ್ ವೇಳೆಗ ಬರ ಪರಿಹಾರ ವಿತರಣೆಯಾಗಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಶೇಕಡ 95ರಷ್ಟು ರೈತರು ಫ್ರೂಟ್ಸ್ ಗುರುತಿನ ಸಂಖ್ಯೆ ಹೊಂದಿದ್ದಾರೆ. ಆದರೆ, ಒಟ್ಟು ಸಾಗುವಳಿ ವಿಸ್ತೀರ್ಣದ ಶೇ 63ರಷ್ಟು ಮಾತ್ರ ದತ್ತಾಂಶದಲ್ಲಿ ದಾಖಲಾಗಿದೆ. ಆದ್ದರಿಂದ ವಿಸ್ತೀರ್ಣದ ವಿವರವನ್ನು ದಾಖಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರದಲ್ಲಿ ಫ್ರೂಟ್ಸ್ ದತ್ತಾಂಶದಲ್ಲಿ ದಾಖಲಾದ ವಿಸ್ತೀರ್ಣದ ಆಧಾರದಲ್ಲೇ ಪರಿಹಾರ ವಿತರಣೆ ನಡೆಯಲಿದೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಕಂದಾಯ ಇಲಾಖೆ ಕಚೇರಿಗಳಲ್ಲಿ ಫ್ರೂಟ್ಸ್ ದತ್ತಾಂಶದಲ್ಲಿ ವಿಸ್ತೀರ್ಣ ದಾಖಲಿಸಲು ಅವಕಾಶ ಕಲ್ಪಿಸಲಾಗುವುದು. ರೈತರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…