ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಬಂದಿದ್ದು, ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿಗಳ ಮಾಹಿತಿ ವ್ಯವಸ್ಥೆ (ಫ್ರೂಟ್ಸ್) ದತ್ತಾಂಶದ ಆಧಾರದಲ್ಲಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಆಯ್ದ ಉಪ ವಿಭಾಗಾಧಿಕಾರಗಳು ಮತ್ತು ತಹಶೀಲ್ದಾರರ ಜೊತೆ ಸಭೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಅವಧಿಯಲ್ಲಿ ಬರ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ನಡೆದಿದ್ದು, ಆ ಎಲ್ಲಾ ಅಕ್ರಮಗಳನ್ನು ತಡೆದು ಫ್ರೂಟ್ಸ್ ದತ್ತಾಂಶದ ಆಧಾರದ ಮೇಲೆ ಪರಿಹಾರ ವಿತರಣೆ ಮಾಡಲು ಮುಂದಾಗಿದ್ದೇವೆ. ಎಲ್ಲವೂ ಅಂದುಕೊಂಡಂತೆ ಆದರೆ, ರೈತರಿಗೆ ಡಿಸೆಂಬರ್ ವೇಳೆಗ ಬರ ಪರಿಹಾರ ವಿತರಣೆಯಾಗಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಶೇಕಡ 95ರಷ್ಟು ರೈತರು ಫ್ರೂಟ್ಸ್ ಗುರುತಿನ ಸಂಖ್ಯೆ ಹೊಂದಿದ್ದಾರೆ. ಆದರೆ, ಒಟ್ಟು ಸಾಗುವಳಿ ವಿಸ್ತೀರ್ಣದ ಶೇ 63ರಷ್ಟು ಮಾತ್ರ ದತ್ತಾಂಶದಲ್ಲಿ ದಾಖಲಾಗಿದೆ. ಆದ್ದರಿಂದ ವಿಸ್ತೀರ್ಣದ ವಿವರವನ್ನು ದಾಖಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರದಲ್ಲಿ ಫ್ರೂಟ್ಸ್ ದತ್ತಾಂಶದಲ್ಲಿ ದಾಖಲಾದ ವಿಸ್ತೀರ್ಣದ ಆಧಾರದಲ್ಲೇ ಪರಿಹಾರ ವಿತರಣೆ ನಡೆಯಲಿದೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಕಂದಾಯ ಇಲಾಖೆ ಕಚೇರಿಗಳಲ್ಲಿ ಫ್ರೂಟ್ಸ್ ದತ್ತಾಂಶದಲ್ಲಿ ವಿಸ್ತೀರ್ಣ ದಾಖಲಿಸಲು ಅವಕಾಶ ಕಲ್ಪಿಸಲಾಗುವುದು. ರೈತರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…