Mysore
29
broken clouds

Social Media

ಮಂಗಳವಾರ, 19 ಮೇ 2026
Light
Dark

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.

ಇಂದು ಮಠಕ್ಕೆ ಭೇಟಿ ನೀಡಿ ಮುರ್ಮು ಅವರು, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿದರು.

ಬಳಿಕ ಜನ್ಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದು ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ, ಆಶ್ರಯದ ಮೂಲಕ ಮಠ ಸೇವೆ ಮಾಡುತ್ತಿದೆ. ಈ ಮಠವೂ ಸೇವೆ ಮತ್ತು ಆಧ್ಮಾತ್ಮಿಕ ಪರಂಪರೆಯ ಹೆಗ್ಗುರುತಾಗಿದೆ. ಸಿದ್ಧಗಂಗಾ ಮಠವು ಬಸವಣ್ಣ ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿದೆ. ದಯಯೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಹೇಳಿದರು.

 

Tags:
error: Content is protected !!