ರಾಜ್ಯ

ನಶಾ ಮುಕ್ತ ಭಾರತ ಅಭಿಯಾನ : ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಬೆಂಗಳೂರು : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.

ಈ ಬೃಹತ್ ಅಭಿಯಾನವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್,ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್,ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್,
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.

ದೇಶಾದ್ಯಂತ 1 ಲಕ್ಷ ಕಿಲೋಮೀಟ‌ರುಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್ ನಂದಿನಿ ಮಿಥುನ್ ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.

ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.

ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.

ಆಂದೋಲನ ಡೆಸ್ಕ್

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

12 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

13 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

14 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

14 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

15 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

16 hours ago