ರಾಜ್ಯ

ಮೈಸೂರಿನಲ್ಲಿ ಡ್ರಗ್ಸ್ ಜಾಲ : ಪೊಲೀಸರ ಲೋಪ ಗಂಭೀರ ವಿಷಯ : ಗೃಹ ಸಚಿವ

ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಬರಬೇಕಿದೆ. ಆದರೆ ರಾಜಾರೋಷವಾಗಿ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿತ್ತು ಎಂಬುದು ಆತಂಕದ ವಿಚಾರ. ಸ್ಥಳೀಯ ಪೊಲೀಸರಿಗೆ ಇದು ಗೊತ್ತಿಲ್ಲ ಎಂದರೆ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.

ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯವಿರುವ ಸೂಕ್ತ ಕ್ರಮಗಳನ್ನು ಅವರು ತೆಗೆದುಕೊಳ್ಳುತ್ತಾರೆ ಎಂದರು.

ಬೆಂಗಳೂರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿಗಳಲ್ಲಿ ಬಳಸಲು ಜಿಲೆಟಿನ್‌ಗಳನ್ನು ತರಲಾಗಿತ್ತು ಎಂಬ ಮಾಹಿತಿ ಇದೆ. ಆರೋಪಿ ಪೊಲೀಸರನ್ನು ಕಂಡ ತಕ್ಷಣ ಜಿಲೆಟಿನ್‌ಗಳನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದರು.

ಧರ್ಮಸ್ಥಳ ಭಾಗದಲ್ಲಿ ಎಸ್‌ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವರದಿ ಸಲ್ಲಿಕೆಯಾದ ಬಳಿಕ ಅದರ ವಾಸ್ತವಾಂಶಗಳನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು. ಶಾಸಕ ದೇವೇಂದ್ರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ. ಈ ಬಗ್ಗೆ ನಾನು ಏನನ್ನು ಹೇಳಲು ಸಾಧ್ಯ? ಸದ್ಯ ಮಟ್ಟಿಗೆ ಈ ವಿಚಾರ ಚರ್ಚೆ ಮಾಡದಿರುವುದೇ ಸೂಕ್ತ ಎಂದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

6 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago