G Parameshwara
ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಬರಬೇಕಿದೆ. ಆದರೆ ರಾಜಾರೋಷವಾಗಿ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿತ್ತು ಎಂಬುದು ಆತಂಕದ ವಿಚಾರ. ಸ್ಥಳೀಯ ಪೊಲೀಸರಿಗೆ ಇದು ಗೊತ್ತಿಲ್ಲ ಎಂದರೆ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.
ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯವಿರುವ ಸೂಕ್ತ ಕ್ರಮಗಳನ್ನು ಅವರು ತೆಗೆದುಕೊಳ್ಳುತ್ತಾರೆ ಎಂದರು.
ಬೆಂಗಳೂರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿಗಳಲ್ಲಿ ಬಳಸಲು ಜಿಲೆಟಿನ್ಗಳನ್ನು ತರಲಾಗಿತ್ತು ಎಂಬ ಮಾಹಿತಿ ಇದೆ. ಆರೋಪಿ ಪೊಲೀಸರನ್ನು ಕಂಡ ತಕ್ಷಣ ಜಿಲೆಟಿನ್ಗಳನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದರು.
ಧರ್ಮಸ್ಥಳ ಭಾಗದಲ್ಲಿ ಎಸ್ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವರದಿ ಸಲ್ಲಿಕೆಯಾದ ಬಳಿಕ ಅದರ ವಾಸ್ತವಾಂಶಗಳನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.
ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು. ಶಾಸಕ ದೇವೇಂದ್ರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ. ಈ ಬಗ್ಗೆ ನಾನು ಏನನ್ನು ಹೇಳಲು ಸಾಧ್ಯ? ಸದ್ಯ ಮಟ್ಟಿಗೆ ಈ ವಿಚಾರ ಚರ್ಚೆ ಮಾಡದಿರುವುದೇ ಸೂಕ್ತ ಎಂದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…