G Parameshwara
ಬೆಂಗಳೂರು : ಮುಂಬೈನಿಂದ ಮೈಸೂರಿಗೆ ಬಂದ ಮಹಾರಾಷ್ಟ್ರ ಪೊಲೀಸರು ಮಾದಕ ವಸ್ತುಗಳ ತಯಾರಿಕೆಯ ಸ್ಥಳವನ್ನು ಪತ್ತೆ ಹಚ್ಚುತ್ತಾರೆ ಎಂದರೆ, ನಮಲ್ಲಿ ಲೋಪ ಇರುವುದು ಎದ್ದು ಕಾಣುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ಬರಬೇಕಿದೆ. ಆದರೆ ರಾಜಾರೋಷವಾಗಿ ಮಾದಕ ವಸ್ತುಗಳನ್ನು ತಯಾರಿಸಲಾಗುತ್ತಿತ್ತು ಎಂಬುದು ಆತಂಕದ ವಿಚಾರ. ಸ್ಥಳೀಯ ಪೊಲೀಸರಿಗೆ ಇದು ಗೊತ್ತಿಲ್ಲ ಎಂದರೆ ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕಿದೆ ಎಂದರು.
ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಗತ್ಯವಿರುವ ಸೂಕ್ತ ಕ್ರಮಗಳನ್ನು ಅವರು ತೆಗೆದುಕೊಳ್ಳುತ್ತಾರೆ ಎಂದರು.
ಬೆಂಗಳೂರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣವನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಲ್ಲು ಕ್ವಾರಿಗಳಲ್ಲಿ ಬಳಸಲು ಜಿಲೆಟಿನ್ಗಳನ್ನು ತರಲಾಗಿತ್ತು ಎಂಬ ಮಾಹಿತಿ ಇದೆ. ಆರೋಪಿ ಪೊಲೀಸರನ್ನು ಕಂಡ ತಕ್ಷಣ ಜಿಲೆಟಿನ್ಗಳನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದರು.
ಧರ್ಮಸ್ಥಳ ಭಾಗದಲ್ಲಿ ಎಸ್ಐಟಿ ತಂಡ ವಿಚಾರಣೆ ನಡೆಸುತ್ತಿದೆ. ಈ ಹಂತದಲ್ಲಿ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡುವುದಿಲ್ಲ. ತನಿಖೆ ವರದಿ ಸಲ್ಲಿಕೆಯಾದ ಬಳಿಕ ಅದರ ವಾಸ್ತವಾಂಶಗಳನ್ನು ಆಧರಿಸಿ ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದರು.
ದಲಿತ ಮುಖ್ಯಮಂತ್ರಿ ವಿಚಾರವಾಗಿ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ಪರಮೇಶ್ವರ್ ನಿರಾಕರಿಸಿದರು. ಶಾಸಕ ದೇವೇಂದ್ರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದಿದ್ದಾರೆ. ಈ ಬಗ್ಗೆ ನಾನು ಏನನ್ನು ಹೇಳಲು ಸಾಧ್ಯ? ಸದ್ಯ ಮಟ್ಟಿಗೆ ಈ ವಿಚಾರ ಚರ್ಚೆ ಮಾಡದಿರುವುದೇ ಸೂಕ್ತ ಎಂದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…