ರಾಜ್ಯ

ಮಾದಕವಸ್ತು ಕಳ್ಳಸಾಗಾಣಿಕೆ ಪ್ರಕರಣ : ಪ್ರಿಯಾಂಕ್ ಖರ್ಗೆ ಆಪ್ತನ ಬಂಧನ

ಕಲಬುರಗಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತರೂ ಆಗಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ದಾರೆ. ನಿಷೇಧಿತ 120 ಕ್ಕೂ ಹೆಚ್ಚು ಎನ್ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಈ ಪ್ರಕರಣದಲ್ಲಿ ತೌಸಿಫ್ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಲಿಂಗರಾಜ್ ಕಣ್ಣಿ ಈ ಹಿಂದೆ ಬಿಜೆಪಿಯಲ್ಲಿ ಇದ್ದರು. 2023ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದರು.

ಮಹಾರಾಷ್ಟ್ರದ ಥಾಣೆಯಲ್ಲಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ವೇಳೆ ಲಿಂಗರಾಜ ಕಣ್ಣಿ ಬಳಿ 20 ಬಾಟಲಿಗಳಲ್ಲಿ ನಿಷೇಧಿತ ಕೋಡಿನ್ ಆಧಾರಿತ ಕೆಮ್ಮು ಸಿರಪ್, ಶೆಡ್ಯೂಲ್-ಎಚ್ ಮಾದಕವಸ್ತುಗಳು ಪತ್ತೆಯಾಗಿವೆ. ಈ ಮಾದಕವಸ್ತುಗಳನ್ನು ವಶಪಡಿಸಿಕೊಂಡಿರುವ ಮಹಾರಾಷ್ಟ್ರ ಎಟಿಎಸ್ ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

12 mins ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

1 hour ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

4 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

8 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

9 hours ago