Drug smuggling case Lingaraj Kanni arrested
ಕಲಬುರಗಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತರೂ ಆಗಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ದಾರೆ. ನಿಷೇಧಿತ 120 ಕ್ಕೂ ಹೆಚ್ಚು ಎನ್ ರೆಕ್ಸ್ ಬಾಟಲ್ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಈ ಪ್ರಕರಣದಲ್ಲಿ ತೌಸಿಫ್ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಲಿಂಗರಾಜ್ ಕಣ್ಣಿ ಈ ಹಿಂದೆ ಬಿಜೆಪಿಯಲ್ಲಿ ಇದ್ದರು. 2023ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದರು.
ಮಹಾರಾಷ್ಟ್ರದ ಥಾಣೆಯಲ್ಲಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ವೇಳೆ ಲಿಂಗರಾಜ ಕಣ್ಣಿ ಬಳಿ 20 ಬಾಟಲಿಗಳಲ್ಲಿ ನಿಷೇಧಿತ ಕೋಡಿನ್ ಆಧಾರಿತ ಕೆಮ್ಮು ಸಿರಪ್, ಶೆಡ್ಯೂಲ್-ಎಚ್ ಮಾದಕವಸ್ತುಗಳು ಪತ್ತೆಯಾಗಿವೆ. ಈ ಮಾದಕವಸ್ತುಗಳನ್ನು ವಶಪಡಿಸಿಕೊಂಡಿರುವ ಮಹಾರಾಷ್ಟ್ರ ಎಟಿಎಸ್ ಪೊಲೀಸರು ಬಂಧಿಸಿದ್ದಾರೆ.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…