ರಾಜ್ಯ

ಮಾದಕವಸ್ತು ಕಳ್ಳಸಾಗಾಣಿಕೆ ಪ್ರಕರಣ : ಪ್ರಿಯಾಂಕ್ ಖರ್ಗೆ ಆಪ್ತನ ಬಂಧನ

ಕಲಬುರಗಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತರೂ ಆಗಿದ್ದಾರೆ. ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ದಾರೆ. ನಿಷೇಧಿತ 120 ಕ್ಕೂ ಹೆಚ್ಚು ಎನ್ ರೆಕ್ಸ್ ಬಾಟಲ್‌ಗಳನ್ನು ಸಾಗಿಸುತ್ತಿದ್ದ ವೇಳೆ ಬಜಾರ್ ಪೇಠ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಈ ಪ್ರಕರಣದಲ್ಲಿ ತೌಸಿಫ್ ಆಸಿಫ್ ತುರವೇ ಪ್ರಮುಖ ಆರೋಪಿಯಾಗಿದ್ದು, ಲಿಂಗರಾಜ್ ಕಣ್ಣಿ ಮತ್ತು ಕಲಬುರಗಿಯ ಸಯ್ಯದ್ ಇರ್ಫಾನ್ ಸಹ ಬಂಧನಕ್ಕೊಳಗಾಗಿದ್ದಾರೆ. ಮುಂಬೈನ ಬಜಾರ್ ಪೇಠ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಘಟನೆ ಕಲಬುರಗಿ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ಪ್ರಕರಣದ ಕುರಿತು ಮುಂಬೈ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಲಿಂಗರಾಜ್ ಕಣ್ಣಿ ಈ ಹಿಂದೆ ಬಿಜೆಪಿಯಲ್ಲಿ ಇದ್ದರು. 2023ರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ಸೇರಿದ್ದರು.

ಮಹಾರಾಷ್ಟ್ರದ ಥಾಣೆಯಲ್ಲಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ವೇಳೆ ಲಿಂಗರಾಜ ಕಣ್ಣಿ ಬಳಿ 20 ಬಾಟಲಿಗಳಲ್ಲಿ ನಿಷೇಧಿತ ಕೋಡಿನ್ ಆಧಾರಿತ ಕೆಮ್ಮು ಸಿರಪ್, ಶೆಡ್ಯೂಲ್-ಎಚ್ ಮಾದಕವಸ್ತುಗಳು ಪತ್ತೆಯಾಗಿವೆ. ಈ ಮಾದಕವಸ್ತುಗಳನ್ನು ವಶಪಡಿಸಿಕೊಂಡಿರುವ ಮಹಾರಾಷ್ಟ್ರ ಎಟಿಎಸ್ ಪೊಲೀಸರು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

9 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

9 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

10 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

11 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

11 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

12 hours ago