ಬೆಂಗಳೂರು : ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಎಫ್ಐಆರ್ ರದ್ದು ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂಗೆ ಆರ್ಜಿ ಸಲ್ಲಿಸುತ್ತಿದ್ದು, ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಪ್ರಶಾಂತ್ ರಂಕ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಎರಡು ದಿನಗಳ ಒಳಗಾಗಿ ಮೇಲ್ಮನವಿ ಸಲ್ಲಿಸಲಾಗುವುದು. ಇದಕ್ಕೆ ಗೃಹ ಹಾಗೂ ಕಾನೂನು ಇಲಾಖೆಯ ಸಮ್ಮತಿಯೂ ಇದೆ ಎಂದು ಸಿಸಿಬಿ ಪೊಲೀಸ್ ಮೂಲಗಳು ತಿಳಿಸಿವೆ.
ಸಿಸಿಬಿ ಪೊಲೀಸರು ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಹೇಳಿಕೆ ಹಾಗೂ ಸಾಕ್ಷಿಗಳ ಹೇಳಿಕೆ ಹೊರತುಪಡಿಸಿದರೆ, ಅರ್ಜಿದಾರರು ಪಾರ್ಟಿ ಆಯೋಜಿಸಿದ್ದರು ಅಥವಾ ಡ್ರಗ್ಸ್ ಪೂರೈಸಿದ್ದರು ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಿಲ್ಲ ಎಂದು ಹೇಳಿದ್ದ ನ್ಯಾಯಾಲಯ ಪ್ರಕರಣವನ್ನು ರದ್ದುಗೊಳಿಸಿತ್ತು .
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…