ರಾಜ್ಯ

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಗೆ ರಾಜ್ಯ ಸರ್ಕಾರ ದಂಧೆಕೋರರನ್ನು ಬೆಂಬಲಿಸುತ್ತಿದೆ. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಹಚ್ಚಿ ಸುಮಾರು 390 ಕೋಟಿ ರೂ ಮೌಲ್ಯದ 192 ಕೆಜಿ ಡ್ರಗ್ಸ್‌ನನು ಮಹಾರಾಷ್ಟ್ರ ಪೊಲೀಸರ ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಬೆಂಗಳೂರಿನ 3 ಡ್ರಗ್ಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ 56 ಕೋಟಿ ರೂ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್‌ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್‌ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಈ ಕೂಡಲೇ ಯುವ ಜನಾಂಗಕ್ಕೆ ಮಾರಕವಾಗಿರುವ ಈ ಡ್ರಗಸ್‌ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

13 mins ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

45 mins ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

1 hour ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

1 hour ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

2 hours ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

2 hours ago