ಬೆಂಗಳೂರು: ಮಹಾರಾಷ್ಟ್ರದ ಎಎನ್ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರು ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಒಂದು ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು ಪತ್ತೆಯಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಪೊಲೀಸರು ಮಾತ್ರ ಆ ದಾಳಿಯಲ್ಲಿ ಇರಲಿಲ್ಲ. ನಮ್ಮ ಪೊಲೀಸರು ಇದ್ದರು. ಬೆಂಗಳೂರು ಪೊಲೀಸರು, ಡಿಸಿಪಿಗಳು ಕೂಡ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ವೇಳೆ 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದರು. ಇನ್ನು ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದು, ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…
ಚಾಮರಾಜನಗರ: ಕರ್ತವ್ಯ ಮುಗಿಸಿ ಮನೆಗೆ ಬದ ತಕ್ಷಣ ಹೃದಯಾಘಾತ ಸಂಭವಿಸಿ ಎಎಸ್ಐ ಮೃತಪಟ್ಟಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.…
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…
ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್ಐಆರ್…
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…