ಬೆಂಗಳೂರು: ಮಹಾರಾಷ್ಟ್ರದ ಎಎನ್ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಅವರು ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂಬ ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾದದ್ದು. ಒಂದು ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತು ಪತ್ತೆಯಾಗಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಪೊಲೀಸರು ಮಾತ್ರ ಆ ದಾಳಿಯಲ್ಲಿ ಇರಲಿಲ್ಲ. ನಮ್ಮ ಪೊಲೀಸರು ಇದ್ದರು. ಬೆಂಗಳೂರು ಪೊಲೀಸರು, ಡಿಸಿಪಿಗಳು ಕೂಡ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು. ದಾಳಿ ವೇಳೆ 1 ಕೋಟಿ ಮೌಲ್ಯದ ಡ್ರಗ್ಸ್ ಕಚ್ಚಾ ವಸ್ತುಗಳು ಪತ್ತೆಯಾಗಿವೆ ಎಂದರು. ಇನ್ನು ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದು, ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…