ರಾಜ್ಯ

ದುನಿಯಾ ವಿಜಯ ಡಿವೋರ್ಸ್‌ ಅರ್ಜಿ ವಜಾ

ಬೆಂಗಳೂರು:  ತಮ್ಮ ಮೊದಲನೇ ಪತ್ನಿ ನಾಗರತ್ನರಿಂದ  ವಿಚ್ಚೇದನಾ ಪಡೆಯಲು ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು(ಜೂ.13) ವಜಾಗೊಳಿಸಿದೆ.

ಪತ್ನಿ  ನಾಗರತ್ನ ಜೊತೆ ಬಾಳಲು ಸಾಧ್ಯವಿಲ್ಲ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದು ನಟ ದುನಿಯಾ ವಿಜಯ್ ವಿಚ್ಛೇದನಾ ಕೋರಿ ಶಾಂತಿನಗರದ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು.

ಆದರೆ ಪತ್ನಿ ನಾಗರತ್ನ, ನನಗೆ ಗಂಡ ಬೇಕು ಎಂದು ಅರ್ಜಿ ಸಲ್ಲಿಸಿದ್ದರು. ನಾಗರತ್ನ ವಿರುದ್ಧದ ಆರೋಪಗಳಿಗೆ ಸೂಕ್ತ ಸಾಕ್ಷ್ಯಧಾರ ಇಲ್ಲದ ಹಿನ್ನಲೆಯಲ್ಲಿ ಚಿತ್ರನಟ ದುನಿಯಾ ವಿಜಯ್ ವಿಚ್ಛೇದನಾ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈಗಾಗಲೇ ದುನಿಯಾ ವಿಜಯ್ ಅವರು ಕೀರ್ತಿ ಎನ್ನುವವರನ್ನು ಮದುವೆಯಾಗಿ ಇವರ ಜೊತೆ ಜೀವನ ನಡೆಸುತ್ತಿದ್ದಾರೆ. ನಾಗರತ್ನ ಅವರು ಗಂಡ ಬೇಕು ಎಂದು ಹಠ ಹಿಡಿದಿದ್ದರು. ಈಗಾಗಲೇ ನಾಗರತ್ನ ಅವರಿಂದ ದೂರ ಆಗಿ ದುನಿಯಾ ವಿಜಯ್ ಅವರು ಬೇರೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ.

ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು 2018ರಲ್ಲಿ ಅರ್ಜಿ ಸಲ್ಲಿಸಿದ್ದರು. 6 ವರ್ಷಗಳಿಂದ ಈ ಪ್ರಕರಣ ನಡೆಯುತ್ತಿತ್ತು. 2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್ ಅವರು “ನಾಗರತ್ನ ಜೊತೆ ಬದುಕಲು ಸಾಧ್ಯವಿಲ್ಲ. ಮಕ್ಕಳ ಜವಾಬ್ದಾರಿ ನಾನೇ ತಗೊಳ್ಳುವೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ” ಎಂದು ಹೇಳಿದ್ದರು. ನಾಗರತ್ನ ಅವರು “ಜೀವನಾಂಶ ನೀಡಿರುವುದಕ್ಕೆ ದಾಖಲೆ ಕೊಡಿ” ಎಂದು ಹೇಳಿದ್ದರು.

ದುನಿಯಾ ವಿಜಯ್ ಹಾಗೂ ನಾಗರತ್ನ ದಂಪತಿಗೆ ರಿತನ್ಯ, ಮೊನಿಶಾ, ಸಾಮ್ರಾಟ್ ಎಂಬ ಮಕ್ಕಳಿದ್ದಾರೆ. ಮೊನಿಶಾ ಅವರು ನ್ಯೂಯಾರ್ಕ್‍ನಲ್ಲಿ ಸಿನಿಮಾಕ್ಕೆ ಸಂಬಂಧಪಟ್ಟಂತೆ ಕೋರ್ಸ್ ಮಾಡುತ್ತಿದ್ದಾರೆ. ಸಾಮ್ರಾಟ್ ಸದ್ಯ ಶಿಕ್ಷಣ ಪಡೆಯುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೆ ಪ್ರಥಮ

ಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ…

2 mins ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.…

45 mins ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https:karresults.nic.in ನಲ್ಲಿ…

1 hour ago

ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಮುಖ್ಯಸ್ಥನ ಸಹಾಯಕ ಸಾವು

ಟೆಲ್‌ಅವೀವ್:‌ ಕದನ ವಿರಾಮದ ನಡುವೆಯೂ ಲೆಬನಾನ್‌ನಲ್ಲಿ ಇಸ್ರೇಲ್‌ ಏರ್‌ಸ್ಟೈಕ್‌ ನಡೆಸಿ ಹಿಜ್ಬುಲ್ಲಾ ಮುಖ್ಯಸ್ಥ ನಯಿಮ್‌ ಕಾಸೆಮ್‌ನ ಸೋದರಳಿಯ ಯೂಸುಫ್‌ ಹರ್ಷಿಯನ್ನು…

1 hour ago

ಹಾರ್ಮುಜ್‌ ಸಂಚಾರಕ್ಕೆ 2 ಹೊಸ ಮಾರ್ಗ ಪ್ರಕಟಿಸಿದ ಐಆರ್‌ಜಿಸಿ

ಟೆಹ್ರಾನ್‌ : ಅಮೆರಿಕ ಮತ್ತು ಇರಾನ್‌ ಮಧ್ಯೆ ಕದನ ವಿರಾಮ ಘೋಷಣೆಯಾದ ಬಳಿಕ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…

1 hour ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಏಪ್ರಿಲ್.‌15ಕ್ಕೆ ಅಂತಿಮ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.‌15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ…

2 hours ago