ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನು ಘೋಷಿಸಿದೆ.
ನಾಡಹಬ್ಬ ದಸರಾ ಪ್ರಯುಕ್ತ ಅ.3ರಿಂದ 20ರವರೆಗೆ ದಸರಾ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, ಸಿಬಿಸಿಎಸ್ಇ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ. ಏಕೆಂದರೆ ಅವು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ಅವಧಿ ಬೇರೆಯಾಗಿರುತ್ತದೆ.
ಕಳೆದ ವರ್ಷ ಕರಾವಳಿ ಭಾಗದಲ್ಲಿ ದಸರಾ ರಜೆಯನ್ನು ಕೊಂಚ ಮಾರ್ಪಾಡು ಮಾಡಲಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಬದಲಾವಣೆ ಮಾಡದೇ ಸಂಪೂರ್ಣ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ಜಾರಿಗೊಳಿಸಿದೆ.
ಶಾಲಾ ಶಿಕ್ಷಣ ಇಲಾಖೆ 2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಪ್ರಾರಂಭದಲ್ಲೇ ಹೊರಡಿಸಿತ್ತು. ಅದರ ಅನುಸಾರ ಅಕ್ಟೋಬರ್ನಲ್ಲಿ 11 ದಿನಗಳು ಮಾತ್ರ ತರಗತಿ ನಡೆಸಿ 17 ದಿನ ದಸರಾ ರಜೆಯನ್ನು ಘೋಷಿಸಿದೆ.
ಅ.21 ರಿಂದ ಏಪ್ರಿಲ್ 10 ರವರೆಗೆ ಈ ವರ್ಷದ 2ನೇ ಶೈಕ್ಷಣಿಕ ಅವಧಿ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್ನ್ನು ಪ್ರತಿನಿಧಿಸುವ ಪಾಲಿಕೆ…