ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನು ಘೋಷಿಸಿದೆ.
ನಾಡಹಬ್ಬ ದಸರಾ ಪ್ರಯುಕ್ತ ಅ.3ರಿಂದ 20ರವರೆಗೆ ದಸರಾ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, ಸಿಬಿಸಿಎಸ್ಇ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ. ಏಕೆಂದರೆ ಅವು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ಅವಧಿ ಬೇರೆಯಾಗಿರುತ್ತದೆ.
ಕಳೆದ ವರ್ಷ ಕರಾವಳಿ ಭಾಗದಲ್ಲಿ ದಸರಾ ರಜೆಯನ್ನು ಕೊಂಚ ಮಾರ್ಪಾಡು ಮಾಡಲಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಬದಲಾವಣೆ ಮಾಡದೇ ಸಂಪೂರ್ಣ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ಜಾರಿಗೊಳಿಸಿದೆ.
ಶಾಲಾ ಶಿಕ್ಷಣ ಇಲಾಖೆ 2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಪ್ರಾರಂಭದಲ್ಲೇ ಹೊರಡಿಸಿತ್ತು. ಅದರ ಅನುಸಾರ ಅಕ್ಟೋಬರ್ನಲ್ಲಿ 11 ದಿನಗಳು ಮಾತ್ರ ತರಗತಿ ನಡೆಸಿ 17 ದಿನ ದಸರಾ ರಜೆಯನ್ನು ಘೋಷಿಸಿದೆ.
ಅ.21 ರಿಂದ ಏಪ್ರಿಲ್ 10 ರವರೆಗೆ ಈ ವರ್ಷದ 2ನೇ ಶೈಕ್ಷಣಿಕ ಅವಧಿ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…