ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನು ಘೋಷಿಸಿದೆ.
ನಾಡಹಬ್ಬ ದಸರಾ ಪ್ರಯುಕ್ತ ಅ.3ರಿಂದ 20ರವರೆಗೆ ದಸರಾ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, ಸಿಬಿಸಿಎಸ್ಇ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ. ಏಕೆಂದರೆ ಅವು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ಅವಧಿ ಬೇರೆಯಾಗಿರುತ್ತದೆ.
ಕಳೆದ ವರ್ಷ ಕರಾವಳಿ ಭಾಗದಲ್ಲಿ ದಸರಾ ರಜೆಯನ್ನು ಕೊಂಚ ಮಾರ್ಪಾಡು ಮಾಡಲಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಬದಲಾವಣೆ ಮಾಡದೇ ಸಂಪೂರ್ಣ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ಜಾರಿಗೊಳಿಸಿದೆ.
ಶಾಲಾ ಶಿಕ್ಷಣ ಇಲಾಖೆ 2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಪ್ರಾರಂಭದಲ್ಲೇ ಹೊರಡಿಸಿತ್ತು. ಅದರ ಅನುಸಾರ ಅಕ್ಟೋಬರ್ನಲ್ಲಿ 11 ದಿನಗಳು ಮಾತ್ರ ತರಗತಿ ನಡೆಸಿ 17 ದಿನ ದಸರಾ ರಜೆಯನ್ನು ಘೋಷಿಸಿದೆ.
ಅ.21 ರಿಂದ ಏಪ್ರಿಲ್ 10 ರವರೆಗೆ ಈ ವರ್ಷದ 2ನೇ ಶೈಕ್ಷಣಿಕ ಅವಧಿ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…