ರಾಜ್ಯ

ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?

ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನು ಘೋಷಿಸಿದೆ.

ನಾಡಹಬ್ಬ ದಸರಾ ಪ್ರಯುಕ್ತ ಅ.3ರಿಂದ 20ರವರೆಗೆ ದಸರಾ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, ಸಿಬಿಸಿಎಸ್‌ಇ ಹಾಗೂ ಐಎಸ್‌ಸಿಎಸ್‌ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ. ಏಕೆಂದರೆ ಅವು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ಅವಧಿ ಬೇರೆಯಾಗಿರುತ್ತದೆ.

ಕಳೆದ ವರ್ಷ ಕರಾವಳಿ ಭಾಗದಲ್ಲಿ ದಸರಾ ರಜೆಯನ್ನು ಕೊಂಚ ಮಾರ್ಪಾಡು ಮಾಡಲಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಬದಲಾವಣೆ ಮಾಡದೇ ಸಂಪೂರ್ಣ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ಜಾರಿಗೊಳಿಸಿದೆ.

ಶಾಲಾ ಶಿಕ್ಷಣ ಇಲಾಖೆ 2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಪ್ರಾರಂಭದಲ್ಲೇ ಹೊರಡಿಸಿತ್ತು. ಅದರ ಅನುಸಾರ ಅಕ್ಟೋಬರ್‌ನಲ್ಲಿ 11 ದಿನಗಳು ಮಾತ್ರ ತರಗತಿ ನಡೆಸಿ 17 ದಿನ ದಸರಾ ರಜೆಯನ್ನು ಘೋಷಿಸಿದೆ.

ಅ.21 ರಿಂದ ಏಪ್ರಿಲ್‌ 10 ರವರೆಗೆ ಈ ವರ್ಷದ 2ನೇ ಶೈಕ್ಷಣಿಕ ಅವಧಿ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

2 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

2 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

2 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

2 hours ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

2 hours ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago