ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನು ಘೋಷಿಸಿದೆ.
ನಾಡಹಬ್ಬ ದಸರಾ ಪ್ರಯುಕ್ತ ಅ.3ರಿಂದ 20ರವರೆಗೆ ದಸರಾ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, ಸಿಬಿಸಿಎಸ್ಇ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ. ಏಕೆಂದರೆ ಅವು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ಅವಧಿ ಬೇರೆಯಾಗಿರುತ್ತದೆ.
ಕಳೆದ ವರ್ಷ ಕರಾವಳಿ ಭಾಗದಲ್ಲಿ ದಸರಾ ರಜೆಯನ್ನು ಕೊಂಚ ಮಾರ್ಪಾಡು ಮಾಡಲಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಬದಲಾವಣೆ ಮಾಡದೇ ಸಂಪೂರ್ಣ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ಜಾರಿಗೊಳಿಸಿದೆ.
ಶಾಲಾ ಶಿಕ್ಷಣ ಇಲಾಖೆ 2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಪ್ರಾರಂಭದಲ್ಲೇ ಹೊರಡಿಸಿತ್ತು. ಅದರ ಅನುಸಾರ ಅಕ್ಟೋಬರ್ನಲ್ಲಿ 11 ದಿನಗಳು ಮಾತ್ರ ತರಗತಿ ನಡೆಸಿ 17 ದಿನ ದಸರಾ ರಜೆಯನ್ನು ಘೋಷಿಸಿದೆ.
ಅ.21 ರಿಂದ ಏಪ್ರಿಲ್ 10 ರವರೆಗೆ ಈ ವರ್ಷದ 2ನೇ ಶೈಕ್ಷಣಿಕ ಅವಧಿ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…