ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ. ಹೀಗೆ, ಸಕಲ ಸಿದ್ದತೆ ಭರದಿಂದ ಆರಂಭಿಸಿರುವ ರಾಜ್ಯ ಸರ್ಕಾರ, ಶಾಲಾ ಮಕ್ಕಳಿಗೆ ಈ ಬಾರಿಯ ದಸರಾ ರಜೆಯ ದಿನಾಂಕವನ್ನು ಘೋಷಿಸಿದೆ.
ನಾಡಹಬ್ಬ ದಸರಾ ಪ್ರಯುಕ್ತ ಅ.3ರಿಂದ 20ರವರೆಗೆ ದಸರಾ ರಜೆ ಘೋಷಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ನೀಡಿ ಆದೇಶ ಹೊರಡಿಸಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಆದರೆ, ಸಿಬಿಸಿಎಸ್ಇ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ಈ ರಜೆಗಳು ಅನ್ವಯವಾಗುವುದಿಲ್ಲ. ಏಕೆಂದರೆ ಅವು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುವುದರಿಂದ ಆ ಶಾಲೆಗಳ ರಜೆಯ ದಿನಾಂಕ ಹಾಗೂ ಅವಧಿ ಬೇರೆಯಾಗಿರುತ್ತದೆ.
ಕಳೆದ ವರ್ಷ ಕರಾವಳಿ ಭಾಗದಲ್ಲಿ ದಸರಾ ರಜೆಯನ್ನು ಕೊಂಚ ಮಾರ್ಪಾಡು ಮಾಡಲಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಬದಲಾವಣೆ ಮಾಡದೇ ಸಂಪೂರ್ಣ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ಜಾರಿಗೊಳಿಸಿದೆ.
ಶಾಲಾ ಶಿಕ್ಷಣ ಇಲಾಖೆ 2024-25ನೇ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಪ್ರಾರಂಭದಲ್ಲೇ ಹೊರಡಿಸಿತ್ತು. ಅದರ ಅನುಸಾರ ಅಕ್ಟೋಬರ್ನಲ್ಲಿ 11 ದಿನಗಳು ಮಾತ್ರ ತರಗತಿ ನಡೆಸಿ 17 ದಿನ ದಸರಾ ರಜೆಯನ್ನು ಘೋಷಿಸಿದೆ.
ಅ.21 ರಿಂದ ಏಪ್ರಿಲ್ 10 ರವರೆಗೆ ಈ ವರ್ಷದ 2ನೇ ಶೈಕ್ಷಣಿಕ ಅವಧಿ ಪ್ರಾರಂಭವಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…