ರಾಜ್ಯ

ರೈತ ಉತ್ಪಾದಕ ಸಂಸ್ಥೆಗಳ ಬಾಕಿ ಅನುದಾನ ಶೀಘ್ರ ಬಿಡುಗಡೆ: ಎನ್.ಚಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ ಜಲಾನಯನ ಇಲಾಖೆ ವತಿಯಿಂದ ಸ್ಥಾಪಿಸಲಾಗಿರುವ ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಇರುವ ಅನುದಾನವನ್ನು ಆದಷ್ಟು ಶೀಘ್ರ ಒದಗಿಸುವುದಾಗಿ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸಭೆ ಸದಸ್ಯ ಅರಗ ಜ್ಞಾನೇಂದ್ರ ಅವರ ಗಮನ ಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗಧಿಪಡಿಸಿದ ಅನುದಾನ ಪೂರ್ಣವಾಗಿ ಬಿಡುಗಡೆಯಾಗದೇ ಕೊರತೆ ಉಂಟಾಗಿದೆ. ಆದರೆ ನಮ್ಮ ಸರ್ಕಾರ ರೈತ ಪರವಾಗಿದ್ದು, ಆದಷ್ಟು ಹೆಚ್ಚಿನ ಅನುದಾನವನ್ನು ಈ ವರ್ಷದ ಹಣಕಾಸು ವರ್ಷದಲ್ಲೇ ಬಿಡುಗಡೆ ಮಾಡಲಾಗುವುದು. ಉಳಿಕೆ ಹಣವನ್ನು ಮುಂದಿನ ಹಣಕಾಸಿನ ವರ್ಷದಲ್ಲಿ ಹೊಂದಾಣಿಕೆ ಮಾಡಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಅಮೃತ ರೈತ ಉತ್ಪಾದಕರ ಸಂಸ್ಥೆ ಯೋಜನೆಯಡಿ ಬೇಡಿಕೆ ಮತ್ತು ಬಿಡುಗಡೆಯಾದ ಅನುದಾನದ ವಿವರಗಳು

2021-22
ಒಟ್ಟು ಗುರಿ 750 ಎಫ್.ಪಿ.ಒ ಅನುದಾನದ ಗುರಿ 225 ಕೋಟಿಗಳು
ರಚನೆಯಾದ ಎಫ್.ಪಿ.ಒ 330 ಸಂಖ್ಯೆ
ಪ್ರಥಮ ವರ್ಷಕ್ಕೆ ಬೇಕಾದ ಅನುದಾನ 330*8.75 ಲಕ್ಷಗಳು = 28.88 ಕೋಟಿಗಳು
ಬಿಡುಗಡೆಯಾದ ಅನುದಾನ 10.35 ಕೋಟಿಗಳು
ಬಾಕಿ 18.53 ಕೋಟಿಗಳು

2022-23
ಕಳೆದ ವರ್ಷ 2021-22ರ ಬಾಕಿ 18.53 ಕೋಟಿಗಳು
ಕಳೆದ ವರ್ಷ ರಚಿಸಿದ (2021-22) 330 ಸಂಘಗಳ 2ನೇ ವರ್ಷದ ಬೇಡಿಕೆ 330*12.09 ಲಕ್ಷಗಳು = 39.89 ಕೋಟಿಗಳು
2022-23ನೇ ಸಾಲಿನಲ್ಲಿ ರಚನೆಯಾದ 156 ಸಂಘಗಳ ಮೊದಲನೇ ವರ್ಷದ ಬೇಡಿಕೆ 156*8.75 ಲಕ್ಷಗಳು = 13.65 ಕೋಟಿಗಳು
2021-22ನೇ ಸಾಲು ಸೇರಿದಂದ 2022-23ನೇ ಸಾಲಿಗೆ ಬೇಕಾದ ಒಟ್ಟು ಅನುದಾನ 72.07 ಕೋಟಿಗಳು
ಬಿಡುಗಡೆಯಾದ ಅನುದಾನ 33.98 ಕೋಟಿಗಳು
ಬಾಕಿ ಅನುದಾನ 38.98 ಕೋಟಿಗಳು

2023-24 (ಯಾವುದೇ ಹೊಸ ಸಂಘ ರಚನೆಯಾಗಿರುವುದಿಲ್ಲ)
ಕಳೆದ ವರ್ಷ 2022-23ರ ಬಾಕಿ 38.98 ಕೋಟಿಗಳು
2021-22ನೇ ಸಾಲಿನಲ್ಲಿ ರಚಿಸಿದ 330 ಸಂಘಗಳ 3ನೇ ವರ್ಷದ ಅನುದಾನ ಬೇಡಿಕೆ 330*9.16 ಲಕ್ಷಗಳು = 30.22 ಕೋಟಿಗಳು
2022-23ನೇ ಸಾಲಿನಲ್ಲಿ ರಚಿಸಿದ 156 ಸಂಘಗಳ 2ನೇ ವರ್ಷದ ಬೇಡಿಕೆ 156*12.09 ಲಕ್ಷಗಳು = 18.86 ಕೋಟಿಗಳು
2023-24ನೇ ಸಾಲಿನ ಒಟ್ಟು ಬೇಡಿಕೆ 88.16 ಕೋಟಿಗಳು
ಬಿಡುಗಡೆಯಾದ ಅನುದಾನ 4.0 ಕೋಟಿಗಳು
ಬಾಕಿ 84.16 ಕೋಟಿಗಳು

2024-25
ಕಳೆದ ವರ್ಷದ ಬಾಕಿ(2023-24) 84.16 ಕೋಟಿಗಳು
2022-23ನೇ ಸಾಲಿನಲ್ಲಿ ರಚಿಸಿದ 156 ಸಂಘಗಳ 3ನೇ ವರ್ಷದ ಅನುದಾನ ಬೇಡಿಕೆ 156*9.16 ಲಕ್ಷಗಳು = 14.28 ಕೋಟಿಗಳು
ಒಟ್ಟು ಬೇಡಿಕೆ 98.44 ಕೋಟಿಗಳು
ಬಿಡುಗಡೆ 1.16 ಕೋಟಿಗಳು
ಬಾಕಿ 97.28 ಕೋಟಿಗಳು

97.28 ಕೋಟಿಗಳ ಬಾಕಿ ಬೇಡಿಕೆಯಲ್ಲಿ 2024-25ನೇ ಸಾಲಿಗೆ ರೂ.54 ಕೋಟಿಗಳ ಅನುದಾನ ಬೇಡಿಕೆಗಾಗಿ ಹಣಕಾಸು ಇಲಾಖೆಗೆ ಪ್ರಸ್ತಾವಣೆ ಸಲ್ಲಿಸಿದ್ದು, ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ.

ಉಳಿದ ಬಾಕಿ ಬೇಡಿಕೆ ರೂ.43 ಕೋಟಿಗಳನ್ನು ಮುಂದಿನ ಆರ್ಥಿಕ ವರ್ಷ 2025-26ನೇ ಸಾಲಿನಲ್ಲಿ ಅಂತಿಮವಾಗಿ ಪಡೆದು ಸಂಘಗಳ ಪ್ರಗತಿಯನ್ನು ಪರಿಶೀಲಿಸಿ ವೆಚ್ಚ ಭರಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

49 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago