ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಸೋಲದೇವನಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು, ಟಕ್ಕಳಕಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಹಲವು ವರ್ಷಗಳಿಂದ ಪದೇ ಪದೇ ಭೂಮಿ ಕಂಪಿಸುತ್ತಿದೆ. ಜೊತೆಗೆ ನಿಗೂಢ ಶಬ್ಧಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದೇ ವರ್ಷದ ಮೊದಲ ತಿಂಗಳು ೨.೬ ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಭೂ ಕಂಪನಕ್ಕೆ ಮನೆಯ ಗೋಡೆ ಬಿರುಕುಬಿಟ್ಟಿದ್ದವು. ಮನೆಯಲ್ಲಿನ ಪಾತ್ರೆಗಳು ಕೆಳಗೆ ಬಿದ್ದಿದ್ದವು. ಕಳೆದ ನಾಲ್ಕೈದು ವರ್ಷಗಳಿಂದ ಭೂಕಂಪನ, ನಿಗೂಢ ಶಬ್ಧಕ್ಕೆ ಜಿಲ್ಲೆಯ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಹಿಂದೆ ಕಂಪಿಸಿದ ಘಟನೆಯಿಂದ ಹಲವು ಕುಟುಂಬಗಳು ಊರು ತೊರೆದಿವೆ. ಇದೀಗ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಪದೇ ಪದೇ ಕಂಪಿಸಲು ಕಾರಣವೇನು ಎಂಬುದೇ ತಿಳಿಯದಾಗಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…