ರಾಜ್ಯ

ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ: ಭಯದಿಂದ ಹೊರಗೆ ಬಂದ ಜನರು

ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಸೋಲದೇವನಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು, ಟಕ್ಕಳಕಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಹಲವು ವರ್ಷಗಳಿಂದ ಪದೇ ಪದೇ ಭೂಮಿ ಕಂಪಿಸುತ್ತಿದೆ. ಜೊತೆಗೆ ನಿಗೂಢ ಶಬ್ಧಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದೇ ವರ್ಷದ ಮೊದಲ ತಿಂಗಳು ೨.೬ ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಭೂ ಕಂಪನಕ್ಕೆ ಮನೆಯ ಗೋಡೆ ಬಿರುಕುಬಿಟ್ಟಿದ್ದವು. ಮನೆಯಲ್ಲಿನ ಪಾತ್ರೆಗಳು ಕೆಳಗೆ ಬಿದ್ದಿದ್ದವು. ಕಳೆದ ನಾಲ್ಕೈದು ವರ್ಷಗಳಿಂದ ಭೂಕಂಪನ, ನಿಗೂಢ ಶಬ್ಧಕ್ಕೆ ಜಿಲ್ಲೆಯ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಹಿಂದೆ ಕಂಪಿಸಿದ ಘಟನೆಯಿಂದ ಹಲವು ಕುಟುಂಬಗಳು ಊರು ತೊರೆದಿವೆ. ಇದೀಗ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಪದೇ ಪದೇ ಕಂಪಿಸಲು ಕಾರಣವೇನು ಎಂಬುದೇ ತಿಳಿಯದಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

1 hour ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

1 hour ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

1 hour ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

4 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

4 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago