ವಿಜಯಪುರ: ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಸೋಲದೇವನಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರು, ಟಕ್ಕಳಕಿ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಇಂದು ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಹಲವು ವರ್ಷಗಳಿಂದ ಪದೇ ಪದೇ ಭೂಮಿ ಕಂಪಿಸುತ್ತಿದೆ. ಜೊತೆಗೆ ನಿಗೂಢ ಶಬ್ಧಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದೇ ವರ್ಷದ ಮೊದಲ ತಿಂಗಳು ೨.೬ ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಭೂ ಕಂಪನಕ್ಕೆ ಮನೆಯ ಗೋಡೆ ಬಿರುಕುಬಿಟ್ಟಿದ್ದವು. ಮನೆಯಲ್ಲಿನ ಪಾತ್ರೆಗಳು ಕೆಳಗೆ ಬಿದ್ದಿದ್ದವು. ಕಳೆದ ನಾಲ್ಕೈದು ವರ್ಷಗಳಿಂದ ಭೂಕಂಪನ, ನಿಗೂಢ ಶಬ್ಧಕ್ಕೆ ಜಿಲ್ಲೆಯ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ. ಹಿಂದೆ ಕಂಪಿಸಿದ ಘಟನೆಯಿಂದ ಹಲವು ಕುಟುಂಬಗಳು ಊರು ತೊರೆದಿವೆ. ಇದೀಗ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಪದೇ ಪದೇ ಕಂಪಿಸಲು ಕಾರಣವೇನು ಎಂಬುದೇ ತಿಳಿಯದಾಗಿದೆ.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…