ರಾಜ್ಯ

ವಿಜಯಪುರದ ಹಲವೆಡೆ ಭೂಕಂಪನ: ಭಾರೀ ಸದ್ದಿಗೆ ಬೆಚ್ಚಿಬಿದ್ದ ಜನತೆ

ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್‌ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ.

ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತ್ರಿಕೋಟ ತಾಲ್ಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಶುಕ್ರವಾರ ರಾತ್ರಿ 10.01ಕ್ಕೆ ಭೂಕಂಪನದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವ ಆಗಿದೆ.

ಇದನ್ನು ಓದಿ: ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು

ಭೂಕಂಪನ ಆಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ ಮೇಲೆ ಇಂತಹ ಅನುಭವ ಆಗುತ್ತಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ. ಭೂಮಿ ಕಂಪಿಸಿದ ಅನುಭವ ಆದ ತಕ್ಷಣವೇ ಹಲವು ಜನರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

ಕಳೆದ ತಿಂಗಳು ಸಿಂದಗಿ ಪಟ್ಟಣದಲ್ಲಿ ಕೂಡ ಸರಣಿ ಭೂಕಂಪನದ ಅನುಭವವಾಗಿತ್ತು. ಈಗ ನಗರ ಭಾಗದಲ್ಲಿ ಕಂಪನದ ಅನುಭವ ಆಗಿ ಜನತೆಯಲ್ಲಿ ಹೆಚ್ಚಿನ ಆತಂಕ ಮೂಡಿಸಿದೆ.

ಇನ್ನು ಈ ಕುರಿತು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದು, ಭೂಮಿ ಆಗಾಗ್ಗೆ ಕಂಪಿಸಲು ಏನೆಲ್ಲಾ ಕಾರಣವಿರಬಹುದು ಎಂದು ಕೂಲಂಕುಷವಾಗಿ ಅಧ್ಯಯನ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago