ವಿಜಯಪುರ: ತಿಕೋಟ ಹಾಗೂ ವಿಜಯಪುರ ತಾಲ್ಲೂಕಿನ ಹಲವೆಡೆ ಭೂಕಂಪನದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ.
ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತ್ರಿಕೋಟ ತಾಲ್ಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಶುಕ್ರವಾರ ರಾತ್ರಿ 10.01ಕ್ಕೆ ಭೂಕಂಪನದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವ ಆಗಿದೆ.
ಇದನ್ನು ಓದಿ: ಕಲಬುರ್ಗಿಯ ಚಿಂಚನಸೂರಿನಲ್ಲಿ ಭೂಕಂಪನ: 2.3 ತೀವ್ರತೆ ದಾಖಲು
ಭೂಕಂಪನ ಆಪ್ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ ಮೇಲೆ ಇಂತಹ ಅನುಭವ ಆಗುತ್ತಿರುವುದರಿಂದ ಜನ ಆತಂಕಕ್ಕೀಡಾಗಿದ್ದಾರೆ. ಭೂಮಿ ಕಂಪಿಸಿದ ಅನುಭವ ಆದ ತಕ್ಷಣವೇ ಹಲವು ಜನರು ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.
ಕಳೆದ ತಿಂಗಳು ಸಿಂದಗಿ ಪಟ್ಟಣದಲ್ಲಿ ಕೂಡ ಸರಣಿ ಭೂಕಂಪನದ ಅನುಭವವಾಗಿತ್ತು. ಈಗ ನಗರ ಭಾಗದಲ್ಲಿ ಕಂಪನದ ಅನುಭವ ಆಗಿ ಜನತೆಯಲ್ಲಿ ಹೆಚ್ಚಿನ ಆತಂಕ ಮೂಡಿಸಿದೆ.
ಇನ್ನು ಈ ಕುರಿತು ವಿಜ್ಞಾನಿಗಳು ಅಧ್ಯಯನ ನಡೆಸುತ್ತಿದ್ದು, ಭೂಮಿ ಆಗಾಗ್ಗೆ ಕಂಪಿಸಲು ಏನೆಲ್ಲಾ ಕಾರಣವಿರಬಹುದು ಎಂದು ಕೂಲಂಕುಷವಾಗಿ ಅಧ್ಯಯನ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…