ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆ ತನ್ನ ಕೈಚಳಕ ತೋರಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ವಜ್ರ ಹಾಗೂ ಹಣವನ್ನು ವಶ ಪಡಿಸಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣದ ಶಂಕನಪುರ, ಶಾರದದೇವಿ ರಸ್ತೆ, ಮರ್ಕೈಂಟಲ್ ಬ್ಯಾಂಕ್ ಬಳಿ, ಜಯನಗರ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ ಇಲಾಖಾ ಅಧಿಕಾರಿಗಳು 16.10 ಕೋಟಿ ಮೌಲ್ಯದ 22ಕೆಜಿ 923ಗ್ರಾಂ ತೂಕದ ಚಿನ್ನ, 6ಕೋಟಿ 45ಲಕ್ಷದ ಬೆಲೆಬಾಳುವ ವಜ್ರ, 1.33 ಕೋಟಿ ರೂ ಹಣ ಪತ್ತೆಯಾಗಿದೆ.
ಬಳ್ಳಾರಿಯಲ್ಲಿ 23 ಲಕ್ಷ ನಗದು ಪತ್ತೆ: ಬ್ರೂಸ್ ಪೊಲೀಸರು, ಎಫ್ಎಸ್ಟಿ ಹಾಗೂ ವಿವಿಎಸ್ಟಿ ಅಧಿಕಾರಿಗಳ ತಂಡದ ಜಂಟಿ ಕಾರ್ಯಾಚರಣೆ ವೇಳೆ ದಾಖಲೆಯಿಲ್ಲದ 23 ಲಕ್ಷ ನಗದು, 450 ಗ್ರಾಂ ಚಿನ್ನ ಹಾಗೂ ಹದಿಮೂರು ಕೆಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಕೊಂಡಿರುವ ಹಣ, ಚಿನ್ನ ಹಾಗೂ ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…