ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆ ತನ್ನ ಕೈಚಳಕ ತೋರಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ವಜ್ರ ಹಾಗೂ ಹಣವನ್ನು ವಶ ಪಡಿಸಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣದ ಶಂಕನಪುರ, ಶಾರದದೇವಿ ರಸ್ತೆ, ಮರ್ಕೈಂಟಲ್ ಬ್ಯಾಂಕ್ ಬಳಿ, ಜಯನಗರ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ ಇಲಾಖಾ ಅಧಿಕಾರಿಗಳು 16.10 ಕೋಟಿ ಮೌಲ್ಯದ 22ಕೆಜಿ 923ಗ್ರಾಂ ತೂಕದ ಚಿನ್ನ, 6ಕೋಟಿ 45ಲಕ್ಷದ ಬೆಲೆಬಾಳುವ ವಜ್ರ, 1.33 ಕೋಟಿ ರೂ ಹಣ ಪತ್ತೆಯಾಗಿದೆ.
ಬಳ್ಳಾರಿಯಲ್ಲಿ 23 ಲಕ್ಷ ನಗದು ಪತ್ತೆ: ಬ್ರೂಸ್ ಪೊಲೀಸರು, ಎಫ್ಎಸ್ಟಿ ಹಾಗೂ ವಿವಿಎಸ್ಟಿ ಅಧಿಕಾರಿಗಳ ತಂಡದ ಜಂಟಿ ಕಾರ್ಯಾಚರಣೆ ವೇಳೆ ದಾಖಲೆಯಿಲ್ಲದ 23 ಲಕ್ಷ ನಗದು, 450 ಗ್ರಾಂ ಚಿನ್ನ ಹಾಗೂ ಹದಿಮೂರು ಕೆಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಕೊಂಡಿರುವ ಹಣ, ಚಿನ್ನ ಹಾಗೂ ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಮಾಹಿತಿ ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…