ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆ ತನ್ನ ಕೈಚಳಕ ತೋರಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ವಜ್ರ ಹಾಗೂ ಹಣವನ್ನು ವಶ ಪಡಿಸಿಕೊಂಡಿದ್ದಾರೆ.
ಬೆಂಗಳೂರು ದಕ್ಷಿಣದ ಶಂಕನಪುರ, ಶಾರದದೇವಿ ರಸ್ತೆ, ಮರ್ಕೈಂಟಲ್ ಬ್ಯಾಂಕ್ ಬಳಿ, ಜಯನಗರ, ಚಾಮರಾಜಪೇಟೆ, ಬಸವನಗುಡಿ ಸೇರಿದಂತೆ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ ಇಲಾಖಾ ಅಧಿಕಾರಿಗಳು 16.10 ಕೋಟಿ ಮೌಲ್ಯದ 22ಕೆಜಿ 923ಗ್ರಾಂ ತೂಕದ ಚಿನ್ನ, 6ಕೋಟಿ 45ಲಕ್ಷದ ಬೆಲೆಬಾಳುವ ವಜ್ರ, 1.33 ಕೋಟಿ ರೂ ಹಣ ಪತ್ತೆಯಾಗಿದೆ.
ಬಳ್ಳಾರಿಯಲ್ಲಿ 23 ಲಕ್ಷ ನಗದು ಪತ್ತೆ: ಬ್ರೂಸ್ ಪೊಲೀಸರು, ಎಫ್ಎಸ್ಟಿ ಹಾಗೂ ವಿವಿಎಸ್ಟಿ ಅಧಿಕಾರಿಗಳ ತಂಡದ ಜಂಟಿ ಕಾರ್ಯಾಚರಣೆ ವೇಳೆ ದಾಖಲೆಯಿಲ್ಲದ 23 ಲಕ್ಷ ನಗದು, 450 ಗ್ರಾಂ ಚಿನ್ನ ಹಾಗೂ ಹದಿಮೂರು ಕೆಜಿ ಬೆಳ್ಳಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಕೊಂಡಿರುವ ಹಣ, ಚಿನ್ನ ಹಾಗೂ ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೆ.ಆರ್.ಎಸ್. ಅಣೆಕಟ್ಟೆಯಿಂದ ಹರಿಯುವ ವಿಶ್ವೇಶ್ವರಯ್ಯ ನಾಲೆಯ ಆಕರ್ಷಣೆ ಹೇಮಂತ್ಕುಮಾರ್ ಮಂಡ್ಯ : ಸುಡುವ ಬಿಸಿಲಿನಿಂದ ಕಂಗಾಲಾದ ಜನರು ತಂಪನ್ನೆರೆಯುವ ಜಲಪಾತಗಳತ್ತ…
ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ…
ಮೈಸೂರು ಜಿಲ್ಲೆಯ ತಿ.ನರಸೀಪುರದಿಂದ ಮಂಡ್ಯ ನಗರಕ್ಕೆ ಬೆಳಗಿನ ಸಮಯದಲ್ಲಿ ಬಸ್ ಸೌಲಭ್ಯಗಳಿಲ್ಲದ್ದರಿಂದ ಈ ಮಾರ್ಗದಲ್ಲಿ ತೆರಳುವ ಅನೇಕ ಶಾಲಾ ಕಾಲೇಜು…
ಮೈಸೂರು ಮಹಾನಗರ ಪಾಲಿಕೆಯು ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಏಪ್ರಿಲ್ ತಿಂಗಳಿನಲ್ಲಿ ಮಾತ್ರ ಶೇ.5ರಷ್ಟು ರಿಯಾಯಿತಿಯನ್ನು ನೀಡಿದೆ. ನಂತರದ ಮೇ…
ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…