ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗೆ ಸಭೆ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ. ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.
ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು.
ವಿಬಿಜಿರಾಮ್ ಜಿ ಕಾಯ್ದೆ ಉದ್ಯೋಗದ ಭರವಸೆ ನುಂಗಿದೆ
ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿಜಿರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದರು.
ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ಕಾಂಗ್ರೆಸ್
ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯಬೇಕು. ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಶಕ್ತಿ ಯಿಲ್ಲದವರಿಗೆ ಆದ್ಯತೆ ಮೇರೆಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯ ಎಂದರು.
ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿದೆ
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷ ವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು.
ಸ್ವಾತಂತ್ರ್ಯ ಲಭಿಸದೆ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ. ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ , ಅಪಪ್ರಚಾರ ಮಾಡಿಕೊಂಡು ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದರು.
ದೇಶದಲ್ಲಿ ರೈತರಿಗೆ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ಮಲ ಹೊರುವ ಪದ್ದತಿ ನಿಷೇಧ, ಸಾಲ ಮನ್ನಾ ಮಾಡಿದ್ದು, ಕಾಂಗ್ರೆಸ್ ಸರ್ಕಾರ. ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ. ನಮ್ಮ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ. ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…