dharmastal case
ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ.
ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್ಜಿಒಗಳಿಗೆ ವಿದೇಶದಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ಭಾರೀ ಪ್ರಮಾಣದ ಹಣ ಹರಿದುಬಂದಿದೆ ಎಂಬುದನ್ನು ಇ.ಡಿ ಪತ್ತೆ ಮಾಡಿದೆ.
ಇದೀಗ ಮಾನವಹಕ್ಕುಗಳು, ಮಹಿಳಾಪರ ಹೋರಾಟ ನಡೆಸುವ ಸಂಘಸಂಸ್ಥೆಯವರು ಸೇರಿದಂತೆ ರಾಜ್ಯದ ಕೆಲವು ಎನ್ಜಿಒಗಳ ಹಣದ ವಹಿವಾಟು ನಡೆದಿರುವ ಕುರಿತು ಇಡಿ ನೋಟಿಸ್ ನೀಡಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.
ಮೇಲ್ನೋಟಕ್ಕೆ ಧರ್ಮಸ್ಥಳದ ವಿರುದ್ಧ ಎನ್ಜಿಒಗಳಿಗೆ ಹಣ ಜಮೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲು ರಾಜ್ಯದ ನಾಲ್ಕಕ್ಕೂ ಹೆಚ್ಚು ಎನ್ಜಿಒಗಳಿಗೆ ನೋಟೀಸ್ ನೀಡಲು ಮುಂದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ(ಎಸ್ಬಿಐ), ಯೂನಿಯನ್ ಬ್ಯಾಂಕ್ ಆಫ್ ಇಂಡಿಯ(ಯುಬಿಐ), ಐಸಿಐಸಿಐ ಸೇರಿದಂತೆ ಕೆಲವು ಪ್ರತಿಷ್ಠಿತ ಬ್ಯಾಂಕ್ಗಳ ಖಾತೆಗಳಿಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ದೇಣಿಗೆ ರೂಪದಲ್ಲಿ ಹಣ ಪಡೆದಿರುವುದು ಕಂಡುಬಂದಿದೆ ಎನ್ನಲಾಗುತ್ತಿದೆ.
ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್ಐಟಿ )ದ ವಶದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತನಿಖೆ ವೇಳೆ ಬಾಯ್ಬಿಟ್ಟಿರುವ ಮಾಹಿತಿಯಂತೆ ತನಗೆ ಯಾರೆಲ್ಲ ಹಣದ ಆಮಿಷವೊಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.
ಬಂಧನದ ನಂತರ ಹಲವಾರು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವುದರಿಂದ ಪ್ರಕರಣವನ್ನು ಬೇಧಿಸಲು ಇಡಿ ಅಖಾಡಕ್ಕಿಳಿದಿದೆ. ಫೆಮಾ ಕಾಯ್ದೆ ಉಲ್ಲಂಘಿಸಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಎನ್ಜಿಒಗಳಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.
ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೊರಟ್ಟಿದ್ದ ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…