ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ.

ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್‌ಜಿಒಗಳಿಗೆ ವಿದೇಶದಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ಭಾರೀ ಪ್ರಮಾಣದ ಹಣ ಹರಿದುಬಂದಿದೆ ಎಂಬುದನ್ನು ಇ.ಡಿ ಪತ್ತೆ ಮಾಡಿದೆ.

ಇದೀಗ ಮಾನವಹಕ್ಕುಗಳು, ಮಹಿಳಾಪರ ಹೋರಾಟ ನಡೆಸುವ ಸಂಘಸಂಸ್ಥೆಯವರು ಸೇರಿದಂತೆ ರಾಜ್ಯದ ಕೆಲವು ಎನ್‌ಜಿಒಗಳ ಹಣದ ವಹಿವಾಟು ನಡೆದಿರುವ ಕುರಿತು ಇಡಿ ನೋಟಿಸ್‌‍ ನೀಡಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.

ಮೇಲ್ನೋಟಕ್ಕೆ ಧರ್ಮಸ್ಥಳದ ವಿರುದ್ಧ ಎನ್‌ಜಿಒಗಳಿಗೆ ಹಣ ಜಮೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲು ರಾಜ್ಯದ ನಾಲ್ಕಕ್ಕೂ ಹೆಚ್ಚು ಎನ್‌ಜಿಒಗಳಿಗೆ ನೋಟೀಸ್‌‍ ನೀಡಲು ಮುಂದಾಗಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯ(ಎಸ್‌‍ಬಿಐ), ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯ(ಯುಬಿಐ), ಐಸಿಐಸಿಐ ಸೇರಿದಂತೆ ಕೆಲವು ಪ್ರತಿಷ್ಠಿತ ಬ್ಯಾಂಕ್‌ಗಳ ಖಾತೆಗಳಿಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ದೇಣಿಗೆ ರೂಪದಲ್ಲಿ ಹಣ ಪಡೆದಿರುವುದು ಕಂಡುಬಂದಿದೆ ಎನ್ನಲಾಗುತ್ತಿದೆ.

ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್‌‍ಐಟಿ )ದ ವಶದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತನಿಖೆ ವೇಳೆ ಬಾಯ್ಬಿಟ್ಟಿರುವ ಮಾಹಿತಿಯಂತೆ ತನಗೆ ಯಾರೆಲ್ಲ ಹಣದ ಆಮಿಷವೊಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.

ಬಂಧನದ ನಂತರ ಹಲವಾರು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವುದರಿಂದ ಪ್ರಕರಣವನ್ನು ಬೇಧಿಸಲು ಇಡಿ ಅಖಾಡಕ್ಕಿಳಿದಿದೆ. ಫೆಮಾ ಕಾಯ್ದೆ ಉಲ್ಲಂಘಿಸಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಎನ್‌ಜಿಒಗಳಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.

ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೊರಟ್ಟಿದ್ದ ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಆಂದೋಲನ ಡೆಸ್ಕ್

Recent Posts

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

20 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

29 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

2 hours ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

3 hours ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

3 hours ago