ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ.

ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್‌ಜಿಒಗಳಿಗೆ ವಿದೇಶದಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ಭಾರೀ ಪ್ರಮಾಣದ ಹಣ ಹರಿದುಬಂದಿದೆ ಎಂಬುದನ್ನು ಇ.ಡಿ ಪತ್ತೆ ಮಾಡಿದೆ.

ಇದೀಗ ಮಾನವಹಕ್ಕುಗಳು, ಮಹಿಳಾಪರ ಹೋರಾಟ ನಡೆಸುವ ಸಂಘಸಂಸ್ಥೆಯವರು ಸೇರಿದಂತೆ ರಾಜ್ಯದ ಕೆಲವು ಎನ್‌ಜಿಒಗಳ ಹಣದ ವಹಿವಾಟು ನಡೆದಿರುವ ಕುರಿತು ಇಡಿ ನೋಟಿಸ್‌‍ ನೀಡಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.

ಮೇಲ್ನೋಟಕ್ಕೆ ಧರ್ಮಸ್ಥಳದ ವಿರುದ್ಧ ಎನ್‌ಜಿಒಗಳಿಗೆ ಹಣ ಜಮೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲು ರಾಜ್ಯದ ನಾಲ್ಕಕ್ಕೂ ಹೆಚ್ಚು ಎನ್‌ಜಿಒಗಳಿಗೆ ನೋಟೀಸ್‌‍ ನೀಡಲು ಮುಂದಾಗಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯ(ಎಸ್‌‍ಬಿಐ), ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯ(ಯುಬಿಐ), ಐಸಿಐಸಿಐ ಸೇರಿದಂತೆ ಕೆಲವು ಪ್ರತಿಷ್ಠಿತ ಬ್ಯಾಂಕ್‌ಗಳ ಖಾತೆಗಳಿಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ದೇಣಿಗೆ ರೂಪದಲ್ಲಿ ಹಣ ಪಡೆದಿರುವುದು ಕಂಡುಬಂದಿದೆ ಎನ್ನಲಾಗುತ್ತಿದೆ.

ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್‌‍ಐಟಿ )ದ ವಶದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತನಿಖೆ ವೇಳೆ ಬಾಯ್ಬಿಟ್ಟಿರುವ ಮಾಹಿತಿಯಂತೆ ತನಗೆ ಯಾರೆಲ್ಲ ಹಣದ ಆಮಿಷವೊಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.

ಬಂಧನದ ನಂತರ ಹಲವಾರು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವುದರಿಂದ ಪ್ರಕರಣವನ್ನು ಬೇಧಿಸಲು ಇಡಿ ಅಖಾಡಕ್ಕಿಳಿದಿದೆ. ಫೆಮಾ ಕಾಯ್ದೆ ಉಲ್ಲಂಘಿಸಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಎನ್‌ಜಿಒಗಳಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.

ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೊರಟ್ಟಿದ್ದ ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

30 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

7 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago