ರಾಜ್ಯ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ: ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆ

ಬೆಂಗಳೂರು: ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲು ವಿದೇಶದಿಂದ ಸರ್ಕಾರೇತರ ಸಂಘಸಂಸ್ಥೆ(ಎನ್‌ಜಿಒ)ಗಳಿಗೆ ಹಣ ಬಂದಿದೆ ಎಂಬ ಶಂಕೆಯ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ರಂಗಪ್ರವೇಶ ಮಾಡಿದೆ.

ಕರ್ನಾಟಕ ಸೇರಿದಂತೆ ದೇಶದ ಕೆಲವು ಮುಂಚೂಣಿಯಲ್ಲಿರುವ ಎನ್‌ಜಿಒಗಳಿಗೆ ವಿದೇಶದಿಂದ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲು ಭಾರೀ ಪ್ರಮಾಣದ ಹಣ ಹರಿದುಬಂದಿದೆ ಎಂಬುದನ್ನು ಇ.ಡಿ ಪತ್ತೆ ಮಾಡಿದೆ.

ಇದೀಗ ಮಾನವಹಕ್ಕುಗಳು, ಮಹಿಳಾಪರ ಹೋರಾಟ ನಡೆಸುವ ಸಂಘಸಂಸ್ಥೆಯವರು ಸೇರಿದಂತೆ ರಾಜ್ಯದ ಕೆಲವು ಎನ್‌ಜಿಒಗಳ ಹಣದ ವಹಿವಾಟು ನಡೆದಿರುವ ಕುರಿತು ಇಡಿ ನೋಟಿಸ್‌‍ ನೀಡಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ.

ಮೇಲ್ನೋಟಕ್ಕೆ ಧರ್ಮಸ್ಥಳದ ವಿರುದ್ಧ ಎನ್‌ಜಿಒಗಳಿಗೆ ಹಣ ಜಮೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲು ರಾಜ್ಯದ ನಾಲ್ಕಕ್ಕೂ ಹೆಚ್ಚು ಎನ್‌ಜಿಒಗಳಿಗೆ ನೋಟೀಸ್‌‍ ನೀಡಲು ಮುಂದಾಗಿದೆ.

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯ(ಎಸ್‌‍ಬಿಐ), ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯ(ಯುಬಿಐ), ಐಸಿಐಸಿಐ ಸೇರಿದಂತೆ ಕೆಲವು ಪ್ರತಿಷ್ಠಿತ ಬ್ಯಾಂಕ್‌ಗಳ ಖಾತೆಗಳಿಗೆ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮ) ಉಲ್ಲಂಘಿಸಿ ದೇಣಿಗೆ ರೂಪದಲ್ಲಿ ಹಣ ಪಡೆದಿರುವುದು ಕಂಡುಬಂದಿದೆ ಎನ್ನಲಾಗುತ್ತಿದೆ.

ಪ್ರಸ್ತುತ ವಿಶೇಷ ತನಿಖಾ ತಂಡ(ಎಸ್‌‍ಐಟಿ )ದ ವಶದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ತನಿಖೆ ವೇಳೆ ಬಾಯ್ಬಿಟ್ಟಿರುವ ಮಾಹಿತಿಯಂತೆ ತನಗೆ ಯಾರೆಲ್ಲ ಹಣದ ಆಮಿಷವೊಡ್ಡಿದ್ದರು ಎಂಬುದನ್ನು ಬಹಿರಂಗಪಡಿಸಿದ್ದಾನೆ ಎಂದು ತಿಳಿದುಬಂದಿದೆ.

ಬಂಧನದ ನಂತರ ಹಲವಾರು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವುದರಿಂದ ಪ್ರಕರಣವನ್ನು ಬೇಧಿಸಲು ಇಡಿ ಅಖಾಡಕ್ಕಿಳಿದಿದೆ. ಫೆಮಾ ಕಾಯ್ದೆ ಉಲ್ಲಂಘಿಸಿ ದೇಣಿಗೆ ಪಡೆದಿರುವುದು ಕಂಡುಬಂದಲ್ಲಿ ಎನ್‌ಜಿಒಗಳಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ.

ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಹೊರಟ್ಟಿದ್ದ ಕೆಲವರಿಗೆ ತನಿಖೆಯ ಬಿಸಿ ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

20 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

20 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

20 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

20 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

20 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago